Homeಕರ್ನಾಟಕಕುಲಕ್ಕೆ ಮೂಲ ಕೊಡಲಿ ಕಾವು- ದೇವು

ಕುಲಕ್ಕೆ ಮೂಲ ಕೊಡಲಿ ಕಾವು- ದೇವು

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂಡಾಯವೆದ್ದು ಬೊಂಬಾಯಿಗೆ ಹೋಗಿದ್ದ ಶಾಸಕರ ಸಾಹಸ ಏನೋ ಮಾಡಲು ಹೋಗಿ ಇನ್ನೇನೋ ಆದಂತಿದೆಯಲ್ಲಾ. ಸೂಕ್ಷ್ಮವಾಗಿ ನೋಡಿದರೆ, ಅಂದರೆ ವಿಶ್ವನಾಥ್ ತರ ಆಲೋಚಿಸಿದರೆ, ಅಂತಹ ಆಗಬಾರದ್ದೇನೂ ಆಗಿಲ್ಲವಂತಲ್ಲಾ. ಹೇಗೆಂದರೆ, ಈ ಕುಮಾರಸ್ವಾಮಿ ಸರಕಾರದಲ್ಲಿದ್ದರೆ ಭಿಕ್ಷುಕರಂತೆ ಇರಬೇಕಿತ್ತು. ಕ್ಷೇತ್ರದ ಕೆಲಸಗಳಿಗಾಗಿ ಬೇಡಬೇಕಿತ್ತು. ಆ ಬೇಡಿಕೆ, ರೇವಣ್ಣನ ಖಾತೆಗೆ ಸಂಬಂಧಿಸಿದ್ದರೆ, ಮುಗಿದೇಹೋಯ್ತು. ಮೂಡ್ಕಿಗಿರಪ್ಪನಿಗೆ ಕೋಳಿ ಕೂದು ಪೊರಮಾಡಿ ಕೈಮುಗಿದಂತಾಗುತ್ತಿತ್ತು. ಇನ್ನುಳಿದ ಬೇಡಿಕೆಗಳು ಪಿತಾಜಿಯವರಾದ ದ್ಯಾವೇಗೌಡರ ಆವಗಾಹನೆಗೆ ಹೋಗಬೇಕಿತ್ತು. ಇಂತಹ ಯಾಚಕತನದಲ್ಲಿ ಶಾಸಕರಾಗಿದ್ದುಕೊಂಡು, ಚಿಲ್ಲರೆ ಹಣದೊಂದಿಗೆ ಮನೆಗೆ ಹೋಗಿ ಮತ್ತು ಚುನಾವಣೆಗೆ ಹೋಗಿ ಸೋಲುವುದಕ್ಕಿಂತ ಮಕ್ಕಳ ಕಾಲಕ್ಕೂ ಮುಗಿಯದಷ್ಟು ಹಣವನ್ನು ಮೋದಿ ಶಾರಿಂದ ಪಡೆದು, ಆ ರಮೇಶ್ ಕುಮಾರ್ ಅದೇನು ಮಾಡುತ್ತಾನೋ ನೋಡೇಬಿಡೋಣ ಎಂಬ ತೀರ್ಮಾನಕ್ಕೆ ಬಂದಿದ್ದರಂತಲ್ಲಾ ಥೂತ್ತೇರಿ.

*****

ಕರ್ನಾಟಕದ ರಾಜಕಾರಣಕ್ಕೇ ಶಾಪದಂತಿರುವ ಅಥವಾ ಒಕ್ಕಲಿಗ ಜನಾಂಗದ ನಾಯಕರುಗಳಿಗೇ ಕಂಟಕವಾಗಿರುವ ದ್ಯಾವೇಗೌಡರು ಮೊನ್ನೆ ತಮ್ಮ ಪಾರ್ಟಿ ಕಾರ್ಯಕರ್ತರ ಎದುರು ಒಂದೇ ಕಣ್ಣಿನಲ್ಲಿ ಎಷ್ಟು ಅತ್ತರೂ ಕಣ್ಣೀರು ಬರದೇ ಕರವಸ್ತ್ರದಿಂದ ವರಸಿಕೊಂಡರಂತಲ್ಲಾ. ಗೌಡರ ಈ ಕಣ್ಣೀರಿಗೆ ಮಂಡ್ಯದ ಮಂತ್ರಿಗಳು ಶಾಸಕರು ಮತ್ತು ನಿಷ್ಠಾವಂತರು ಗೌಡರಿಗೆ ಬರೆಯುತ್ತಿರುವ ಅಥವಾ ಬರೆಯಲು ಯತ್ನಿಸುತ್ತಿರುವ ಕಾಗದಗಳ ಪರಿಣಾಮವೆಂದು ಗೌಡರ ಆಪ್ತವಲಯದ ಆಪಾದನೆಯಾಗಿದೆಯಲ್ಲಾ. ಗೌಡರ ಆವಗಾಹನೆಗೆ ಮಂಡ್ಯದ ಮುಖಂಡರು ಬರೆಯುತ್ತಿರುವ ದೂರಿನ ಪಟ್ಟಿ ಇಂತಿದೆಯಲ್ಲಾ.

ಪಿತೃ ಸಮಾನರು ದೈವ ಸಮಾನರೂ ಆದ ಅಪ್ಪಾಜಿಯವರು ಮತ್ತು ಕುಮಾರಣ್ಣನವರಿಗೆ, ನಮ್ಮ ಶಿರಸಾಷ್ಟಾಂಗ ನಮಸ್ಕಾರಗಳು. ಧೈರ್ಯ ಮಾಡಿ ಈ ಪತ್ರ ಬರೆಯುವ ಉದ್ದೇಶವೇನೆಂದರೆ ಮಂಡ್ಯದಲ್ಲಿ ಚಿರಂಜೀವಿ ನಿಖಿಲ್ ಸೋತ ಮೇಲೆ ತಮ್ಮ ಮನೆಯ ವಾತಾವರಣ ಬದಲಾಗಿದೆ. ಮುಖ್ಯವಾಗಿ ನಾವು ಬಂದಾಗ ಮಡಿಮೈಲಿಗೆ ಬ್ರಾಹ್ಮಣ ಅಸ್ಪøಶ್ಯರನ್ನು ನೋಡಿದಂತೆ ನೋಡುತ್ತೀರಿ ಎಂಬ ವಾಕ್ಯಕ್ಕೆ ಗೌಡರು ಸಿಡಿಮಿಡಿಗೊಂಡರಂತಲ್ಲಾ ಥೂತ್ತೇರಿ…

*****

ಮತ್ತೊಂದು ಪತ್ರದ ಸಾರಾಂಶ. ಅಪ್ಪಾಜಿಯವರೆ ನಾವು ನೀವು ಹೇಳಿದಂತೆ ಕೇಳಿದ್ದೇವೆ. ಕಾಲಲ್ಲಿ ತೋರಿದ ಕೆಲಸವನ್ನ ಕೈಲಿ ಮಾಡಿದ್ದೇವೆ. ಕೈಯಿಂದಲೇ ಹಣ ಹಾಕಿ ರಾಜಕಾರಣ ಮಾಡುತ್ತಿದ್ದೇವೆಯೇ ಹೊರತು ನಿಮ್ಮಿಂದ ಹಣ ಪಡೆದಿಲ್ಲ. ಆದರೂ ನಿಮ್ಮ ಮನೆಗೆ ಬಂದಾಗ, ನಮ್ಮನ್ನು ಕಳ್ಳರಂತೆ ನೋಡುತ್ತೀರಿ. ಇಂತಹ ಅವಮಾನ ಸಹಿಸಲಾಗದೆ ಕೆ.ಆರ್.ಪೇಟೆ ನಾರಾಯಣಗೌಡ ಬಿಕರಿಯಾಗಿ ಹೋದ. ನಮಗೆ ಬೂಕನಕೆರೆ ಎಡೂರಪ್ಪ ದೂರದವನಲ್ಲ. ಆದರೂ ನಾವು ನಿಮ್ಮ ಜೊತೆ ಇದ್ದೇವೆ. ಹೇಳಿದ ಕೆಲಸ ಮಾಡಿದ್ದೇವೆ. ಎಳೆ ಹುಡುಗನನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದಾಗ ಕುಮಾರಣ್ಣನೇ ಸ್ಪರ್ಧಿಸಿದ್ದಾನೆ ಎನ್ನುವಂತೆ ಕೆಲಸ ಮಾಡಿದ್ದೇವೆ. ಕೈಲಿದ್ದ ಕಾಸು ಖಾಲಿಯಾದ ಮೇಲೆ ಕೈ ಸಾಲ ಮಾಡಿದ್ದೇವೆ. ಎಣ್ಣೆ ಅಂಗಡಿ, ಮಿಲಿಟ್ರಿ ಹೋಟೆಲ್ ಬಾಕಿ ಹಾಗೇ ಇದೆ. ಕಿರುಜಾತಿ ಲೀಡರುಗಳನ್ನೆಲ್ಲಾ ತಂದು ನಿಮ್ಮ ಮುಂದೆ ನಿಲ್ಲಿಸಿ ಬಿಕರಿ ಮಾಡಿದೆವು. ಅವರ ಹಳೆ ಬಾಕಿ ಹಾಗೇ ಇದೆ. ನಮ್ಮ ಭಾಷಣದಿಂದ ಜನ ರೊಚ್ಚಿಗೆದ್ದಿದ್ದಾರೆ. ಹೀಗೆ ಮಾತನಾಡಿ ಎಂದು ಹೇಳಿದವರೂ ನೀವೆ. ಈಗ ನಮ್ಮನ್ನ ದೂರುತ್ತಿರುವವರೂ ನೀವೆ. ಹೇಳಿ ನಾವು ಇಲ್ಲೇ ಇರಬೇಕೋ ಅಥವಾ ಬೂಕನಕೆರೆಗೆ ಹೋಗಬೇಕೊ ತಿಳಿಸಿ ಎಂದು ಬರೆದುಬಿಟ್ಟಿದ್ದಾರಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದ ಒಕ್ಕಣೆ ಇಂತಿದೆಯಲ್ಲಾ. ತಂದೆಯಿಲ್ಲದ ನನಗೆ ತಂದೆ ಸಮಾನರೂ ಅಣ್ಣನಿಲ್ಲದ ನನಗೆ ಅಣ್ಣನಂತಿರುವ ಕುಮಾರಣ್ಣ, ಮಂಡ್ಯದ ಚುನಾವಣಾ ಫಲಿತಾಂಶದ ನಂತರ ನಾನು ನಿಮ್ಮ ಮನೆಗೆ ಬಂದಾಗ ಅಪ್ಪಾಜಿಯವರು ಅತ್ತ ನೋಡುತ್ತಿದ್ದರು. ನನ್ನ ಕಡೆ ತಿರುಗಲಿಲ್ಲ. ನೀವು ಪ್ರಜಾವಾಣಿಯ ಜಾಹೀರಾತು ನೋಡುತ್ತ ತಲೆ ಎತ್ತಲಿಲ್ಲ. ನಿಜಕ್ಕೂ ಮಂಡ್ಯದಲ್ಲಿ ನಮ್ಮ ನಿಖಿಲ್ ಸೋತಿದ್ದು ನಮ್ಮಿಂದಲ್ಲ ನಿಮ್ಮಿಂದ. ಕೇಳಿ ಮೊದಲನೆಯದಾಗಿ ಮಂಡ್ಯಕ್ಕೆ ಒಂಟಿ ಕರುವಿನಂತೆ ಆ ಹುಡುಗನನ್ನ ತಂದು ನಿಲ್ಲಿಸಿದ್ದು ದೊಡ್ಡ ತಪ್ಪು. ಆ ನಂತರ ಕುಮಾರಣ್ಣ ಮೂರು ಸುಮಲತಾರನ್ನ ಹುಡುಕಿ ತಂದು ನಿಲ್ಲಿಸಿದ್ದು ಇನ್ನು ದೊಡ್ಡ ತಪ್ಪು. ಆನಂತರ ಕುಮಾರಣ್ಣ ಯಶ್ ಎಂಬ ನಟನನ್ನು ಕೀಳಾಗಿ ನಿಂದಿಸಿದ್ದು ಮಹಾ ಅಪರಾಧ. ಆ ನಟನ ಅಭಿಮಾನಿಗಳು ಇಡೀ ಕರ್ನಾಟಕದಲ್ಲಿ ನಮಗೂ ಓಟಾಕಲಿಲ್ಲ. ಕಾಂಗ್ರೆಸ್ಸಿಗೂ ಓಟು ಹಾಕಲಿಲ್ಲ. ಇನ್ನ ದರ್ಶನ್ ಎಂಬ ದೊಡ್ಡ ನಟನನ್ನ ಕುಮಾರಣ್ಣ ಆಡಿಕೊಂಡರು. ಆ ನಟನ ಇಡೀ ಕರ್ನಾಟಕದ ಅಭಿಮಾನಿಗಳು ದಳಕ್ಕೆ ಓಟು ಮಾಡಲಿಲ್ಲ. ಈ ಹಾಳು ಟಿ.ವಿ ಜನ ಕುಮಾರಣ್ಣನ ಮಾತನ್ನ ಒಂದು ತಿಂಗಳು ಅರೆದರು. ಇನ್ನ ರೇವಣ್ಣನ ಮಾತು ಮಂಡ್ಯದ ಮಹಿಳೆಯರ ಓಟನ್ನೇ ಕಸಿಯಿತು. ನಿಖಿಲರನ್ನು ಸೋಲಿಸಿದವರು ನೀವೇ ಹೊರತು ನಾವಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದಲ್ಲಿ ದೇವೇಗೌಡರನ್ನ ನೇರಾನೇರ ಪ್ರಶ್ನಿಸಿದೆಯಂತಲ್ಲಾ. ಮಾನ್ಯ ದೇವೇಗೌಡರೆ ತಮ್ಮ ರಾಜಕಾರಣವನ್ನ ನೋಡಿದರೆ, ಕುಲಕ್ಕೆ ಮೂಲ ಕೊಡಲಿ ಕಾವು ಎನ್ನುವಂತೆ ಕಾಣುತ್ತಿದ್ದೀರಿ. ಇವತ್ತು ಒಬ್ಬನೇ ಒಬ್ಬ ಧೀಮಂತ ನಾಯಕ ಒಕ್ಕಲಿಗ ಜನಾಂಗದಲ್ಲಿ ಇಲ್ಲದಂತೆ ಮಾಡಿಬಿಟ್ಟಿದ್ದೀರಿ. ಕಾಂಗ್ರೆಸ್‍ನಲ್ಲೂ ಇಲ್ಲ, ದಳದಲ್ಲೂ ಇಲ್ಲ. ಅದಕ್ಕೆ ಇಲ್ಲಿ ಬಿಜೆಪಿ ಕಾಲೂರಿದ್ದು. ಕುಮಾರಣ್ಣ ಅವರ ಜೊತೆ ಸರಕಾರ ಮಾಡಿ ಕಾಲೂರಲು ಅವಕಾಶ ಮಾಡಿದರು. ಈಗ ನಿಮ್ಮಿಬ್ಬರ ಮನೆತನದ ಬುದ್ಧಿಯಿಂದ ಅತ್ತ ಕಾಂಗ್ರೆಸ್ಸೂ ಹಾಳಾಯ್ತು. ದಳವೂ ಉದುರೊಯ್ತು. ಬಿಜೆಪಿ ಕಾಲೂರಿತು. ಕಾರಣ ಇಷ್ಟೆ. ತಾವು ಅನಾದಿಕಾಲದಿಂದ ಕರ್ನಾಟಕ ಮತ್ತು ದೇಶವನ್ನು ಕುರಿತು ಯೋಚಿಸಿದವರಲ್ಲ. ಬರೇ ಕುಟುಂಬವನ್ನು ಕುರಿತು ಯೋಚಿಸಿದಿರಿ. ಅವರ ಅಂತಿಮ ಹಂತ ಯಾವುದು ಎಂದರೆ, ನಾಡಿನ ಒಕ್ಕಲಿಗ ಜನಾಂಗ ನಿಮ್ಮನ್ನ ನಿಮ್ಮ ಕುಟುಂಬವನ್ನು ತಿರಸ್ಕರಿಸಿದೆ. ನಿಮ್ಮ ಪಾರ್ಟಿ ಆಫೀಸು ಹಾಳಾಗಿದೆ. ನೀವೇ ನೇಮಿಸಿದ ಅಧ್ಯಕ್ಷ ನಿಮಗೆ ತಕ್ಕ ಶಾಸ್ತಿ ಮಾಡಿದ. ಈಗಲಾದರೂ ಸಮಗ್ರ ಕರ್ನಾಟಕದಲ್ಲಿ, ದಳ ಎಂಬ ಪ್ರಾದೇಶಿಕ ಪಾರ್ಟಿ ಉಳಿಸಲು ಕಣ್ಣು ತೆರೆಯಿರಿ. ಮಿಸ್ಟರ್ ದೇವೇಗೌಡ್ ಓಪನ್ ಯುವರ್ ಐ ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...