Homeಕರ್ನಾಟಕಕುಲಕ್ಕೆ ಮೂಲ ಕೊಡಲಿ ಕಾವು- ದೇವು

ಕುಲಕ್ಕೆ ಮೂಲ ಕೊಡಲಿ ಕಾವು- ದೇವು

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂಡಾಯವೆದ್ದು ಬೊಂಬಾಯಿಗೆ ಹೋಗಿದ್ದ ಶಾಸಕರ ಸಾಹಸ ಏನೋ ಮಾಡಲು ಹೋಗಿ ಇನ್ನೇನೋ ಆದಂತಿದೆಯಲ್ಲಾ. ಸೂಕ್ಷ್ಮವಾಗಿ ನೋಡಿದರೆ, ಅಂದರೆ ವಿಶ್ವನಾಥ್ ತರ ಆಲೋಚಿಸಿದರೆ, ಅಂತಹ ಆಗಬಾರದ್ದೇನೂ ಆಗಿಲ್ಲವಂತಲ್ಲಾ. ಹೇಗೆಂದರೆ, ಈ ಕುಮಾರಸ್ವಾಮಿ ಸರಕಾರದಲ್ಲಿದ್ದರೆ ಭಿಕ್ಷುಕರಂತೆ ಇರಬೇಕಿತ್ತು. ಕ್ಷೇತ್ರದ ಕೆಲಸಗಳಿಗಾಗಿ ಬೇಡಬೇಕಿತ್ತು. ಆ ಬೇಡಿಕೆ, ರೇವಣ್ಣನ ಖಾತೆಗೆ ಸಂಬಂಧಿಸಿದ್ದರೆ, ಮುಗಿದೇಹೋಯ್ತು. ಮೂಡ್ಕಿಗಿರಪ್ಪನಿಗೆ ಕೋಳಿ ಕೂದು ಪೊರಮಾಡಿ ಕೈಮುಗಿದಂತಾಗುತ್ತಿತ್ತು. ಇನ್ನುಳಿದ ಬೇಡಿಕೆಗಳು ಪಿತಾಜಿಯವರಾದ ದ್ಯಾವೇಗೌಡರ ಆವಗಾಹನೆಗೆ ಹೋಗಬೇಕಿತ್ತು. ಇಂತಹ ಯಾಚಕತನದಲ್ಲಿ ಶಾಸಕರಾಗಿದ್ದುಕೊಂಡು, ಚಿಲ್ಲರೆ ಹಣದೊಂದಿಗೆ ಮನೆಗೆ ಹೋಗಿ ಮತ್ತು ಚುನಾವಣೆಗೆ ಹೋಗಿ ಸೋಲುವುದಕ್ಕಿಂತ ಮಕ್ಕಳ ಕಾಲಕ್ಕೂ ಮುಗಿಯದಷ್ಟು ಹಣವನ್ನು ಮೋದಿ ಶಾರಿಂದ ಪಡೆದು, ಆ ರಮೇಶ್ ಕುಮಾರ್ ಅದೇನು ಮಾಡುತ್ತಾನೋ ನೋಡೇಬಿಡೋಣ ಎಂಬ ತೀರ್ಮಾನಕ್ಕೆ ಬಂದಿದ್ದರಂತಲ್ಲಾ ಥೂತ್ತೇರಿ.

*****

ಕರ್ನಾಟಕದ ರಾಜಕಾರಣಕ್ಕೇ ಶಾಪದಂತಿರುವ ಅಥವಾ ಒಕ್ಕಲಿಗ ಜನಾಂಗದ ನಾಯಕರುಗಳಿಗೇ ಕಂಟಕವಾಗಿರುವ ದ್ಯಾವೇಗೌಡರು ಮೊನ್ನೆ ತಮ್ಮ ಪಾರ್ಟಿ ಕಾರ್ಯಕರ್ತರ ಎದುರು ಒಂದೇ ಕಣ್ಣಿನಲ್ಲಿ ಎಷ್ಟು ಅತ್ತರೂ ಕಣ್ಣೀರು ಬರದೇ ಕರವಸ್ತ್ರದಿಂದ ವರಸಿಕೊಂಡರಂತಲ್ಲಾ. ಗೌಡರ ಈ ಕಣ್ಣೀರಿಗೆ ಮಂಡ್ಯದ ಮಂತ್ರಿಗಳು ಶಾಸಕರು ಮತ್ತು ನಿಷ್ಠಾವಂತರು ಗೌಡರಿಗೆ ಬರೆಯುತ್ತಿರುವ ಅಥವಾ ಬರೆಯಲು ಯತ್ನಿಸುತ್ತಿರುವ ಕಾಗದಗಳ ಪರಿಣಾಮವೆಂದು ಗೌಡರ ಆಪ್ತವಲಯದ ಆಪಾದನೆಯಾಗಿದೆಯಲ್ಲಾ. ಗೌಡರ ಆವಗಾಹನೆಗೆ ಮಂಡ್ಯದ ಮುಖಂಡರು ಬರೆಯುತ್ತಿರುವ ದೂರಿನ ಪಟ್ಟಿ ಇಂತಿದೆಯಲ್ಲಾ.

ಪಿತೃ ಸಮಾನರು ದೈವ ಸಮಾನರೂ ಆದ ಅಪ್ಪಾಜಿಯವರು ಮತ್ತು ಕುಮಾರಣ್ಣನವರಿಗೆ, ನಮ್ಮ ಶಿರಸಾಷ್ಟಾಂಗ ನಮಸ್ಕಾರಗಳು. ಧೈರ್ಯ ಮಾಡಿ ಈ ಪತ್ರ ಬರೆಯುವ ಉದ್ದೇಶವೇನೆಂದರೆ ಮಂಡ್ಯದಲ್ಲಿ ಚಿರಂಜೀವಿ ನಿಖಿಲ್ ಸೋತ ಮೇಲೆ ತಮ್ಮ ಮನೆಯ ವಾತಾವರಣ ಬದಲಾಗಿದೆ. ಮುಖ್ಯವಾಗಿ ನಾವು ಬಂದಾಗ ಮಡಿಮೈಲಿಗೆ ಬ್ರಾಹ್ಮಣ ಅಸ್ಪøಶ್ಯರನ್ನು ನೋಡಿದಂತೆ ನೋಡುತ್ತೀರಿ ಎಂಬ ವಾಕ್ಯಕ್ಕೆ ಗೌಡರು ಸಿಡಿಮಿಡಿಗೊಂಡರಂತಲ್ಲಾ ಥೂತ್ತೇರಿ…

*****

ಮತ್ತೊಂದು ಪತ್ರದ ಸಾರಾಂಶ. ಅಪ್ಪಾಜಿಯವರೆ ನಾವು ನೀವು ಹೇಳಿದಂತೆ ಕೇಳಿದ್ದೇವೆ. ಕಾಲಲ್ಲಿ ತೋರಿದ ಕೆಲಸವನ್ನ ಕೈಲಿ ಮಾಡಿದ್ದೇವೆ. ಕೈಯಿಂದಲೇ ಹಣ ಹಾಕಿ ರಾಜಕಾರಣ ಮಾಡುತ್ತಿದ್ದೇವೆಯೇ ಹೊರತು ನಿಮ್ಮಿಂದ ಹಣ ಪಡೆದಿಲ್ಲ. ಆದರೂ ನಿಮ್ಮ ಮನೆಗೆ ಬಂದಾಗ, ನಮ್ಮನ್ನು ಕಳ್ಳರಂತೆ ನೋಡುತ್ತೀರಿ. ಇಂತಹ ಅವಮಾನ ಸಹಿಸಲಾಗದೆ ಕೆ.ಆರ್.ಪೇಟೆ ನಾರಾಯಣಗೌಡ ಬಿಕರಿಯಾಗಿ ಹೋದ. ನಮಗೆ ಬೂಕನಕೆರೆ ಎಡೂರಪ್ಪ ದೂರದವನಲ್ಲ. ಆದರೂ ನಾವು ನಿಮ್ಮ ಜೊತೆ ಇದ್ದೇವೆ. ಹೇಳಿದ ಕೆಲಸ ಮಾಡಿದ್ದೇವೆ. ಎಳೆ ಹುಡುಗನನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದಾಗ ಕುಮಾರಣ್ಣನೇ ಸ್ಪರ್ಧಿಸಿದ್ದಾನೆ ಎನ್ನುವಂತೆ ಕೆಲಸ ಮಾಡಿದ್ದೇವೆ. ಕೈಲಿದ್ದ ಕಾಸು ಖಾಲಿಯಾದ ಮೇಲೆ ಕೈ ಸಾಲ ಮಾಡಿದ್ದೇವೆ. ಎಣ್ಣೆ ಅಂಗಡಿ, ಮಿಲಿಟ್ರಿ ಹೋಟೆಲ್ ಬಾಕಿ ಹಾಗೇ ಇದೆ. ಕಿರುಜಾತಿ ಲೀಡರುಗಳನ್ನೆಲ್ಲಾ ತಂದು ನಿಮ್ಮ ಮುಂದೆ ನಿಲ್ಲಿಸಿ ಬಿಕರಿ ಮಾಡಿದೆವು. ಅವರ ಹಳೆ ಬಾಕಿ ಹಾಗೇ ಇದೆ. ನಮ್ಮ ಭಾಷಣದಿಂದ ಜನ ರೊಚ್ಚಿಗೆದ್ದಿದ್ದಾರೆ. ಹೀಗೆ ಮಾತನಾಡಿ ಎಂದು ಹೇಳಿದವರೂ ನೀವೆ. ಈಗ ನಮ್ಮನ್ನ ದೂರುತ್ತಿರುವವರೂ ನೀವೆ. ಹೇಳಿ ನಾವು ಇಲ್ಲೇ ಇರಬೇಕೋ ಅಥವಾ ಬೂಕನಕೆರೆಗೆ ಹೋಗಬೇಕೊ ತಿಳಿಸಿ ಎಂದು ಬರೆದುಬಿಟ್ಟಿದ್ದಾರಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದ ಒಕ್ಕಣೆ ಇಂತಿದೆಯಲ್ಲಾ. ತಂದೆಯಿಲ್ಲದ ನನಗೆ ತಂದೆ ಸಮಾನರೂ ಅಣ್ಣನಿಲ್ಲದ ನನಗೆ ಅಣ್ಣನಂತಿರುವ ಕುಮಾರಣ್ಣ, ಮಂಡ್ಯದ ಚುನಾವಣಾ ಫಲಿತಾಂಶದ ನಂತರ ನಾನು ನಿಮ್ಮ ಮನೆಗೆ ಬಂದಾಗ ಅಪ್ಪಾಜಿಯವರು ಅತ್ತ ನೋಡುತ್ತಿದ್ದರು. ನನ್ನ ಕಡೆ ತಿರುಗಲಿಲ್ಲ. ನೀವು ಪ್ರಜಾವಾಣಿಯ ಜಾಹೀರಾತು ನೋಡುತ್ತ ತಲೆ ಎತ್ತಲಿಲ್ಲ. ನಿಜಕ್ಕೂ ಮಂಡ್ಯದಲ್ಲಿ ನಮ್ಮ ನಿಖಿಲ್ ಸೋತಿದ್ದು ನಮ್ಮಿಂದಲ್ಲ ನಿಮ್ಮಿಂದ. ಕೇಳಿ ಮೊದಲನೆಯದಾಗಿ ಮಂಡ್ಯಕ್ಕೆ ಒಂಟಿ ಕರುವಿನಂತೆ ಆ ಹುಡುಗನನ್ನ ತಂದು ನಿಲ್ಲಿಸಿದ್ದು ದೊಡ್ಡ ತಪ್ಪು. ಆ ನಂತರ ಕುಮಾರಣ್ಣ ಮೂರು ಸುಮಲತಾರನ್ನ ಹುಡುಕಿ ತಂದು ನಿಲ್ಲಿಸಿದ್ದು ಇನ್ನು ದೊಡ್ಡ ತಪ್ಪು. ಆನಂತರ ಕುಮಾರಣ್ಣ ಯಶ್ ಎಂಬ ನಟನನ್ನು ಕೀಳಾಗಿ ನಿಂದಿಸಿದ್ದು ಮಹಾ ಅಪರಾಧ. ಆ ನಟನ ಅಭಿಮಾನಿಗಳು ಇಡೀ ಕರ್ನಾಟಕದಲ್ಲಿ ನಮಗೂ ಓಟಾಕಲಿಲ್ಲ. ಕಾಂಗ್ರೆಸ್ಸಿಗೂ ಓಟು ಹಾಕಲಿಲ್ಲ. ಇನ್ನ ದರ್ಶನ್ ಎಂಬ ದೊಡ್ಡ ನಟನನ್ನ ಕುಮಾರಣ್ಣ ಆಡಿಕೊಂಡರು. ಆ ನಟನ ಇಡೀ ಕರ್ನಾಟಕದ ಅಭಿಮಾನಿಗಳು ದಳಕ್ಕೆ ಓಟು ಮಾಡಲಿಲ್ಲ. ಈ ಹಾಳು ಟಿ.ವಿ ಜನ ಕುಮಾರಣ್ಣನ ಮಾತನ್ನ ಒಂದು ತಿಂಗಳು ಅರೆದರು. ಇನ್ನ ರೇವಣ್ಣನ ಮಾತು ಮಂಡ್ಯದ ಮಹಿಳೆಯರ ಓಟನ್ನೇ ಕಸಿಯಿತು. ನಿಖಿಲರನ್ನು ಸೋಲಿಸಿದವರು ನೀವೇ ಹೊರತು ನಾವಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದಲ್ಲಿ ದೇವೇಗೌಡರನ್ನ ನೇರಾನೇರ ಪ್ರಶ್ನಿಸಿದೆಯಂತಲ್ಲಾ. ಮಾನ್ಯ ದೇವೇಗೌಡರೆ ತಮ್ಮ ರಾಜಕಾರಣವನ್ನ ನೋಡಿದರೆ, ಕುಲಕ್ಕೆ ಮೂಲ ಕೊಡಲಿ ಕಾವು ಎನ್ನುವಂತೆ ಕಾಣುತ್ತಿದ್ದೀರಿ. ಇವತ್ತು ಒಬ್ಬನೇ ಒಬ್ಬ ಧೀಮಂತ ನಾಯಕ ಒಕ್ಕಲಿಗ ಜನಾಂಗದಲ್ಲಿ ಇಲ್ಲದಂತೆ ಮಾಡಿಬಿಟ್ಟಿದ್ದೀರಿ. ಕಾಂಗ್ರೆಸ್‍ನಲ್ಲೂ ಇಲ್ಲ, ದಳದಲ್ಲೂ ಇಲ್ಲ. ಅದಕ್ಕೆ ಇಲ್ಲಿ ಬಿಜೆಪಿ ಕಾಲೂರಿದ್ದು. ಕುಮಾರಣ್ಣ ಅವರ ಜೊತೆ ಸರಕಾರ ಮಾಡಿ ಕಾಲೂರಲು ಅವಕಾಶ ಮಾಡಿದರು. ಈಗ ನಿಮ್ಮಿಬ್ಬರ ಮನೆತನದ ಬುದ್ಧಿಯಿಂದ ಅತ್ತ ಕಾಂಗ್ರೆಸ್ಸೂ ಹಾಳಾಯ್ತು. ದಳವೂ ಉದುರೊಯ್ತು. ಬಿಜೆಪಿ ಕಾಲೂರಿತು. ಕಾರಣ ಇಷ್ಟೆ. ತಾವು ಅನಾದಿಕಾಲದಿಂದ ಕರ್ನಾಟಕ ಮತ್ತು ದೇಶವನ್ನು ಕುರಿತು ಯೋಚಿಸಿದವರಲ್ಲ. ಬರೇ ಕುಟುಂಬವನ್ನು ಕುರಿತು ಯೋಚಿಸಿದಿರಿ. ಅವರ ಅಂತಿಮ ಹಂತ ಯಾವುದು ಎಂದರೆ, ನಾಡಿನ ಒಕ್ಕಲಿಗ ಜನಾಂಗ ನಿಮ್ಮನ್ನ ನಿಮ್ಮ ಕುಟುಂಬವನ್ನು ತಿರಸ್ಕರಿಸಿದೆ. ನಿಮ್ಮ ಪಾರ್ಟಿ ಆಫೀಸು ಹಾಳಾಗಿದೆ. ನೀವೇ ನೇಮಿಸಿದ ಅಧ್ಯಕ್ಷ ನಿಮಗೆ ತಕ್ಕ ಶಾಸ್ತಿ ಮಾಡಿದ. ಈಗಲಾದರೂ ಸಮಗ್ರ ಕರ್ನಾಟಕದಲ್ಲಿ, ದಳ ಎಂಬ ಪ್ರಾದೇಶಿಕ ಪಾರ್ಟಿ ಉಳಿಸಲು ಕಣ್ಣು ತೆರೆಯಿರಿ. ಮಿಸ್ಟರ್ ದೇವೇಗೌಡ್ ಓಪನ್ ಯುವರ್ ಐ ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...