Homeಮುಖಪುಟಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ ‘ದೇವೇಗೌಡರು ಕಳೆದು ಹೋಗಿದ್ದಾರೆ, ಹುಡುಕಿ ಕೊಡಿ’ ಎಂದು ರಾಜ್ಯ ಕಾಂಗ್ರೆಸ್ ಕಾಳೆದಿದೆ. ಕನ್ನಡದ ಪ್ರಮುಖ ಪತ್ರಿಕೆಯೊಂದರಲ್ಲಿ ಪ್ರಕಟವಾದ ದೇವೇಗೌಡರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಲೇವಡಿ ಮಾಡಿದೆ.

ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದೇನು?

25 ವರ್ಷಗಳ ಹಿಂದೆ ಯಾರು ಏನು ಹೇಳಿದ್ದರು? ಯಾವ ಪ್ರಮುಖ ಘಟನೆಗಳು ನಡೆದಿತ್ತು ಎಂಬುವುದನ್ನು ಪತ್ರಿಕೆ ಪ್ರಕಟಿಸುತ್ತಿದೆ. ಇಂದು (ಜ.9) 25 ವರ್ಷಗಳ ಹಿಂದೆ ದೇವೇಗೌಡರು ನೀಡಿದ್ದ ಪ್ರಮುಖ ಹೇಳಿಕೆಯೊಂದನ್ನು ಪ್ರಕಟಿಸಿದೆ.

“ಆರೆಸ್ಸೆಸ್, ವಿಹೆಚ್‌ಪಿ, ಭಜರಂಗದಳ ಮತ್ತು ಶಿವಸೇನೆಯಂತಹ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಸಂಘಟನೆಗಳು ರಾಷ್ಟ್ರದ ವಿವಿಧ ಭಾಗಗಳಲ್ಲಿ ಧರ್ಮಾದಂತೆಯನ್ನು ಹಬ್ಬಿಸುತ್ತಿವೆ. ಅವುಗಳ ಚಟುವಟಿಕೆಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಮೋದ್ ಮಹಾಜನ್ ಬೆಂಬಲ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ” ಎಂಬ ದೇವೇಗೌಡರ ಹೇಳಿಕೆಯನ್ನು ಪತ್ರಿಕೆ ಸ್ಮರಿಸಿದೆ. ಇದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಕಾಳೆಲೆದಿದೆ.

ಪ್ರಸ್ತುತ ದೇವೇಗೌಡರ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಹೊಂದಾಣಿಕೆ ಮಾಡಕೊಂಡಿದೆ. ಅಲ್ಲದೆ, ರಾಮ ಮಂದಿರರ ವಿಚಾರವಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಬಿಜೆಪಿಗರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುತ್ತಿದ್ದಾರೆ.

ಈ ಹಿನ್ನೆಲೆ, ಹಳೆಯ ದೇವೇಗೌಡರು ಕಳೆದು ಹೋಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “25 ವರ್ಷಗಳ ಹಿಂದೆ ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ಅಂದಿನ ದೇವೇಗೌಡರು ಈಗ ಕಳೆದುಹೋಗಿದ್ದಾರೆ! ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗದಳದಂತಹ ವಿಧ್ವಂಸಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದು ದೇವೇಗೌಡರಿಗೆ ನೆನಪಿದೆಯೇ? ಈಗ ಅದೇ ವಿಚ್ಛಿದ್ರಕಾರಿ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು ದೇವೇಗೌಡರ ದುರಂತವೋ, ಅವರನ್ನು ಸೆಕ್ಯುಲರ್ ಎಂದು ನಂಬಿದ್ದವರ ದುರಂತವೋ ತಿಳಿಯದು!” ಎಂದು ಕಾಂಗ್ರೆಸ್ ಹೇಳಿದೆ.

ರಾಮ ಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ :

ಅಯೋಧ್ಯೆ ರಾಮ ಮಂದಿರಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸಲಾಗಿದೆ. ರಾಮ ಮಂದಿರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್​.ಮಿಶ್ರಾ, ಆರ್‌ಎಸ್‌ಎಸ್​ ಹಿರಿಯ ನಾಯಕ ರಾಮ್​ ಲಾಲ್ ಹಾಗೂ ವಿಹೆಚ್‌ಪಿಯ ಹಿರಿಯ ನಾಯಕ ಅಲೋಕ್​ ಕುಮಾರ್​, ಡಿಸೆಂಬರ್ 19,2023ರಂದು ದೆಹಲಿಯ ದೇವೇಗೌಡರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿದ್ದರು. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದರು. “ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿದೆ. ಆಹ್ವಾನ ಸ್ವೀಕರಿಸಿದ ನನಗೆ ತುಂಬಾ ಸಂತೋಷ ಆಗಿದೆ” ಎಂದು ಟ್ವಿಟರ್​ನಲ್ಲಿ ದೇವೇಗೌಡರು ಬರೆದುಕೊಂಡಿದ್ದರು.

ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅತ್ಯಂತ ಜಾತ್ಯತೀತ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದ ದೇವೇಗೌಡರು, ಪ್ರಸ್ತುತ ಕೇಸರಿ ಪಾಳೆಯದ ಮಿತ್ರರಾಗಿ ರೂಪಾಂತರಗೊಂಡಿದ್ದಾರೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಲು ಇಚ್ಛಿಸುತ್ತೇನೆ ಎಂದು ಹೇಳುತ್ತಿದ್ದ ಗೌಡರು, ಈಗ ಅಂತಹ ಆಲೋಚನೆಗಳನ್ನು ತಮ್ಮೊಳಗೆ ಅದುಮಿ ಇಟ್ಟುಕೊಳ್ಳಬೇಕಾಗಬಹುದು.

ಇದನ್ನೂ ಓದಿ : ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...