Homeಮುಖಪುಟಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ದೇವೇಗೌಡರು ಕಳೆದುಹೋಗಿದ್ದಾರೆ, ಹುಡುಕಿ ಕೊಡಿ: ಕಾಂಗ್ರೆಸ್

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ ‘ದೇವೇಗೌಡರು ಕಳೆದು ಹೋಗಿದ್ದಾರೆ, ಹುಡುಕಿ ಕೊಡಿ’ ಎಂದು ರಾಜ್ಯ ಕಾಂಗ್ರೆಸ್ ಕಾಳೆದಿದೆ. ಕನ್ನಡದ ಪ್ರಮುಖ ಪತ್ರಿಕೆಯೊಂದರಲ್ಲಿ ಪ್ರಕಟವಾದ ದೇವೇಗೌಡರ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿ ಕಾಂಗ್ರೆಸ್ ಲೇವಡಿ ಮಾಡಿದೆ.

ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದೇನು?

25 ವರ್ಷಗಳ ಹಿಂದೆ ಯಾರು ಏನು ಹೇಳಿದ್ದರು? ಯಾವ ಪ್ರಮುಖ ಘಟನೆಗಳು ನಡೆದಿತ್ತು ಎಂಬುವುದನ್ನು ಪತ್ರಿಕೆ ಪ್ರಕಟಿಸುತ್ತಿದೆ. ಇಂದು (ಜ.9) 25 ವರ್ಷಗಳ ಹಿಂದೆ ದೇವೇಗೌಡರು ನೀಡಿದ್ದ ಪ್ರಮುಖ ಹೇಳಿಕೆಯೊಂದನ್ನು ಪ್ರಕಟಿಸಿದೆ.

“ಆರೆಸ್ಸೆಸ್, ವಿಹೆಚ್‌ಪಿ, ಭಜರಂಗದಳ ಮತ್ತು ಶಿವಸೇನೆಯಂತಹ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ. ದಕ್ಷಿಣ ಗುಜರಾತ್‌ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಸಂಘಟನೆಗಳು ರಾಷ್ಟ್ರದ ವಿವಿಧ ಭಾಗಗಳಲ್ಲಿ ಧರ್ಮಾದಂತೆಯನ್ನು ಹಬ್ಬಿಸುತ್ತಿವೆ. ಅವುಗಳ ಚಟುವಟಿಕೆಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಮೋದ್ ಮಹಾಜನ್ ಬೆಂಬಲ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ” ಎಂಬ ದೇವೇಗೌಡರ ಹೇಳಿಕೆಯನ್ನು ಪತ್ರಿಕೆ ಸ್ಮರಿಸಿದೆ. ಇದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಕಾಳೆಲೆದಿದೆ.

ಪ್ರಸ್ತುತ ದೇವೇಗೌಡರ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಹೊಂದಾಣಿಕೆ ಮಾಡಕೊಂಡಿದೆ. ಅಲ್ಲದೆ, ರಾಮ ಮಂದಿರರ ವಿಚಾರವಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಬಿಜೆಪಿಗರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುತ್ತಿದ್ದಾರೆ.

ಈ ಹಿನ್ನೆಲೆ, ಹಳೆಯ ದೇವೇಗೌಡರು ಕಳೆದು ಹೋಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. “25 ವರ್ಷಗಳ ಹಿಂದೆ ಕೋಮು ಶಕ್ತಿಗಳ ವಿರುದ್ಧ ತೊಡೆ ತಟ್ಟಿದ್ದ ಅಂದಿನ ದೇವೇಗೌಡರು ಈಗ ಕಳೆದುಹೋಗಿದ್ದಾರೆ! ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಜರಂಗದಳದಂತಹ ವಿಧ್ವಂಸಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದು ದೇವೇಗೌಡರಿಗೆ ನೆನಪಿದೆಯೇ? ಈಗ ಅದೇ ವಿಚ್ಛಿದ್ರಕಾರಿ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು ದೇವೇಗೌಡರ ದುರಂತವೋ, ಅವರನ್ನು ಸೆಕ್ಯುಲರ್ ಎಂದು ನಂಬಿದ್ದವರ ದುರಂತವೋ ತಿಳಿಯದು!” ಎಂದು ಕಾಂಗ್ರೆಸ್ ಹೇಳಿದೆ.

ರಾಮ ಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ :

ಅಯೋಧ್ಯೆ ರಾಮ ಮಂದಿರಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸಲಾಗಿದೆ. ರಾಮ ಮಂದಿರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್​.ಮಿಶ್ರಾ, ಆರ್‌ಎಸ್‌ಎಸ್​ ಹಿರಿಯ ನಾಯಕ ರಾಮ್​ ಲಾಲ್ ಹಾಗೂ ವಿಹೆಚ್‌ಪಿಯ ಹಿರಿಯ ನಾಯಕ ಅಲೋಕ್​ ಕುಮಾರ್​, ಡಿಸೆಂಬರ್ 19,2023ರಂದು ದೆಹಲಿಯ ದೇವೇಗೌಡರ ನಿವಾಸಕ್ಕೆ ತೆರಳಿ ಆಹ್ವಾನ ನೀಡಿದ್ದರು. ಈ ವಿಚಾರವನ್ನು ಟ್ವೀಟ್ ಮೂಲಕ ದೇವೇಗೌಡರು ಹಂಚಿಕೊಂಡಿದ್ದರು. “ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಲಾಗಿದೆ. ಆಹ್ವಾನ ಸ್ವೀಕರಿಸಿದ ನನಗೆ ತುಂಬಾ ಸಂತೋಷ ಆಗಿದೆ” ಎಂದು ಟ್ವಿಟರ್​ನಲ್ಲಿ ದೇವೇಗೌಡರು ಬರೆದುಕೊಂಡಿದ್ದರು.

ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅತ್ಯಂತ ಜಾತ್ಯತೀತ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದ ದೇವೇಗೌಡರು, ಪ್ರಸ್ತುತ ಕೇಸರಿ ಪಾಳೆಯದ ಮಿತ್ರರಾಗಿ ರೂಪಾಂತರಗೊಂಡಿದ್ದಾರೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಲು ಇಚ್ಛಿಸುತ್ತೇನೆ ಎಂದು ಹೇಳುತ್ತಿದ್ದ ಗೌಡರು, ಈಗ ಅಂತಹ ಆಲೋಚನೆಗಳನ್ನು ತಮ್ಮೊಳಗೆ ಅದುಮಿ ಇಟ್ಟುಕೊಳ್ಳಬೇಕಾಗಬಹುದು.

ಇದನ್ನೂ ಓದಿ : ಜ.22ರಂದು ದೇವಸ್ಥಾನಗಳಲ್ಲಿ ‘ವಿಶೇಷ’ ಪೂಜೆಗೆ ಸೂಚನೆ; ‘ಮೃದು ಹಿಂದುತ್ವ’ದ ಮೊರೆ ಹೋಯ್ತಾ ಕಾಂಗ್ರೆಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...