Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...