Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...