Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...