Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...