Homeಮುಖಪುಟಅಂಬಾನಿ ಕುಟುಂಬದ ಸಮಾರಂಭಕ್ಕಾಗಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ: ಮಾಹಿತಿಯೇ ಇಲ್ಲ ಎಂದ ಡಿಜಿಸಿಎ!

ಅಂಬಾನಿ ಕುಟುಂಬದ ಸಮಾರಂಭಕ್ಕಾಗಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ: ಮಾಹಿತಿಯೇ ಇಲ್ಲ ಎಂದ ಡಿಜಿಸಿಎ!

ಒಂದು ದಿನಕ್ಕೆ ಗರಿಷ್ಠ 5 ದೇಶಿಯ ವಿಮಾನಗಳ ಹಾರಾಟದ ಸಾಮಾರ್ಥ್ಯ ಹೊಂದಿರುವ ಜಾಮ್‌ನಗರ ವಿಮಾನ ನಿಲ್ದಾಣದಿಂದ ಮಾರ್ಚ್ 1 ರಂದು 70 ವಿಮಾನಗಳು ಹಾರಾಟ ನಡೆಸಿವೆ ಎಂದು ತಿಳಿದು ಬಂದಿದೆ.

- Advertisement -
- Advertisement -

ಮುಕೇಶ್ ಅಂಬಾನಿ ಅವರ ಮಗನ ಮದುವೆ ಪೂರ್ವ ಕಾರ್ಯಕ್ರಮಗಳ ನಿಮಿತ್ತ ಗುಜರಾತ್‌ನ ಜಾಮ್‌ನಗರದ ದೇಶೀಯ ವಿಮಾನ ನಿಲ್ದಾಣಕ್ಕೆ 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಆದರೆ, ಈ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರ (ಡಿಜಿಸಿಎ) ಕಚೇರಿ ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ, ಜಾಮ್‌ನಗರದ ದೇಶೀಯ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಿ ವಿದೇಶಿ ವಿಮಾನಗಳ ಲ್ಯಾಂಡಿಗ್‌ ಮತ್ತು ಟೇಕ್‌ ಆಫ್‌ಗೆ ಅನುವು ಮಾಡಿಕೊಡಲಾಗಿತ್ತು. ಭಾರತೀಯ ವಾಯುಪಡೆಯೇ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ವಿಮಾನಗಳ ಹಾರಾಟಕ್ಕೆ ಬೇಕಾದ ವ್ಯವಸ್ಥೆಗಳನ್ನು ಒದಗಿಸಿತ್ತು. ಪರಿಣಾಮ ಒಂದು ದಿನಕ್ಕೆ ಗರಿಷ್ಠ 5 ದೇಶಿಯ ವಿಮಾನಗಳ ಹಾರಾಟದ ಸಾಮಾರ್ಥ್ಯ ಹೊಂದಿರುವ ನಿಲ್ದಾಣದಿಂದ ಮಾರ್ಚ್ 1 ರಂದು 70 ವಿಮಾನಗಳು ಹಾರಾಟ ನಡೆಸಿವೆ ಎಂದು ತಿಳಿದು ಬಂದಿದೆ.

ಮುಕೇಶ್ ಅಂಬಾನಿ ಅವರ ಪುತ್ರನ ವಿವಾಹ ಪೂರ್ವ ಸಮಾರಂಭಕ್ಕೆ ಅತಿಥಿಗಳ ಆಗಮನಕ್ಕೆ ಅನುಕೂಲವಾಗುವಂತೆ ಡಿಜಿಸಿಎ ವಿಮಾನ ನಿಲ್ದಾಣವನ್ನು ಯಾವ ಆಧಾರದ ಮೇಲೆ ಮೇಲ್ದರ್ಜೆಗೇರಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಎಂಬವರು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಮಾಹಿತಿ ಕೋರಿದ್ದರು.

ಆದರೆ, ಈ ಬಗ್ಗೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಬಳಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಡಿಜಿಸಿಎಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅರ್ಜಿದಾರ ಟಿ ನರಸಿಂಹ ಮೂರ್ತಿ, “ಡಿಜಿಸಿಎಯ ಪ್ರತಿಕ್ರಿಯೆ ಕಳವಳ ಉಂಟು ಮಾಡಿದೆ. ಪಾಕಿಸ್ತಾನದ ಗಡಿಯಲ್ಲಿ ಪ್ರಾಥಮಿಕವಾಗಿ ಮಿಲಿಟರಿ ಏರ್‌ಫೀಲ್ಡ್ ಆಗಿರುವ ವಿಮಾನ ನಿಲ್ದಾಣಕ್ಕೆ ಅಂತಹ ಸ್ಥಾನಮಾನವನ್ನು ಹೇಗೆ ನೀಡಲಾಗಿದೆ ಎಂದು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಭಾರತದ ಎಲ್ಲಾ ನಾಗರಿಕರು ತಮ್ಮ ಕುಟುಂಬ ವ್ಯವಹಾರಗಳಿಗೆ ಇದೇ ರೀತಿಯ ವಿಶೇಷ ಅನುಮತಿಗಳನ್ನು ಪಡೆಯುತ್ತಾರೆಯೇ? ನಾನು ಡಿಜಿಸಿಎಯ ಪ್ರತಿಕ್ರಿಯೆಯ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇನೆ” ಎಂದು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್‌ ತಿಳಿಸಿದೆ.

ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿದ ಕಾನೂನು, ನಿಯಮಗಳು ಅಥವಾ ನಿಬಂಧನೆಗಳ ಮಾಹಿತಿ ಮಾತ್ರವಲ್ಲದೆ, ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪ್ರಮಾಣಪತ್ರದ (ಎನ್‌ಒಸಿ) ನಕಲನ್ನು ಮತ್ತು ಸೀಮಿತ ಸಂಪನ್ಮೂಲಗಳನ್ನು ಹೊಂದಿರುವ ವಿಮಾನ ನಿಲ್ದಾಣಕ್ಕೆ ಮಾಡಿದ ಬದಲಾವಣೆಗಳಿಗೆ ತಗಲಿದ ವೆಚ್ಚದ ಮಾಹಿತಿಯನ್ನು ಮೂರ್ತಿ ಕೋರಿದ್ದರು ಎಂದು ವರದಿ ಹೇಳಿದೆ.

ಮಾಹಿತಿ ಕೃಪೆ : deccanherald.com

ಇದನ್ನೂ ಓದಿ : ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...