Homeಕರೋನಾ ತಲ್ಲಣ5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ- ಹೊಸ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ತಡೆಗಟ್ಟಲು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಾಸ್ಕ್ ಧರಿಸುವುದು ಅಗತ್ಯವಿದ್ದರೂ ಕೂಡ, ಕಡ್ಡಾಯವಲ್ಲ ಎಂದು ಕೇಂದ್ರ ಸಚಿವಾಲಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಆರೋಗ್ಯ ಸೇವೆಗಳ ನಿರ್ದೇಶನಾಲಯ (DGHS) ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಹೊಸ ಮಾರ್ಗಸೂಚಿಯ ಪ್ರಕಾರ 6 ರಿಂದ 11 ವರ್ಷದೊಳಗಿನ ಮಕ್ಕಳು ಪೋಷಕರು ಮತ್ತು ಸಲಹಾ ವೈದ್ಯರ ಮೇಲ್ವಿಚಾರಣೆಯಲ್ಲಿ ಮಾತ್ರ ಮಾಸ್ಕ್ ಧರಿಸಬಹುದು ಎಂದು ಹೇಳಲಾಗಿದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳಲ್ಲಿ ಕೊರೊನಾ ಬಂದರೆ ಏನು ಮಾಡಬೇಕು, ಏನು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂಬುದಕ್ಕೆ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

“ಡೈರೆಕ್ಟರೇಟ್ ಜನರಲ್ ಆಫ್ ಹೆಲ್ತ್ ಸರ್ವೀಸಸ್ (DGHS) ಮಾರ್ಗಸೂಚಿಗಳ ಪ್ರಕಾರ, 5 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸು ಮಾಡುವುದಿಲ್ಲ. 6 ರಿಂದ 11 ವರ್ಷ ವಯಸ್ಸಿನ ಮಕ್ಕಳು ಪೋಷಕರು ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿ ಮುಖವಾಡ ಧರಿಸಬಹುದು” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಆಂಟಿವೈರಲ್ ಔಷಧಿ ರೆಮ್‌ಡೆಸಿವಿರ್‌ ಬಳಕೆ ಮಾಡುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೊರೊನಾವೈರಸ್ ಕಾಯಿಲೆಗೆ ಸಂಬಂಧಿಸಿದಂತೆ ಡಿಜಿಹೆಚ್ಎಸ್ ತನ್ನ ಕ್ಲಿನಿಕಲ್ ಮ್ಯಾನೇಜ್ಮೆಂಟ್ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ್ದು, ಇದರ ಪ್ರಕಾರ ಜ್ವರ ಮತ್ತು ಶೀತವನ್ನು ಹೊರತುಪಡಿಸಿ, ಲಕ್ಷಣರಹಿತ ಮತ್ತು ಸೌಮ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಸಚಿವಾಲಯದ ಅಡಿಯಲ್ಲಿರುವ ಎಲ್ಲಾ ಔಷಧಿಗಳನ್ನು ಕೈಬಿಡಲಾಗಿದೆ. ಸೌಮ್ಯ ಲಕ್ಷಣಗಳಿರುವ ಹಾಗೂ ಲಕ್ಷಣರಹಿತ ಸೋಂಕಿನ ಪ್ರಕರಣದಲ್ಲಿ ಸ್ಟೆರಾಯ್ಡ್‌ಗಳ ಬಳಕೆ ಹಾನಿಕಾರಕವಾಗಬಹುದು ಎಂದು ತಿಳಿಸಿದೆ.

ಗಂಭೀರ ಪ್ರಕರಣಗಳಲ್ಲಿ ಮಾತ್ರ, ಆಸ್ಪತ್ರೆಗೆ ಸೇರಿದ ಮಕ್ಕಳಿಗೆ ಸ್ಟೆರಾಯ್ಡ್‌ ಬಳಸಬಹುದು. ಪೋಷಕರು ತಾವೇ ಮಕ್ಕಳಿಗೆ ಔಷಧಿಗಳನ್ನು ನೀಡುವಂತಿಲ್ಲ. ಮಕ್ಕಳಿಗೆ ಬೇಕಾಬಿಟ್ಟಿ ಸಿಟಿ ಸ್ಕ್ಯಾನ್ ಮಾಡಿಸಬಾರದು. ಗಂಭೀರ ಪ್ರಕರಣದಲ್ಲಿ ಎಚ್‌ಆರ್‌ಸಿಟಿ ಸ್ಕ್ಯಾನ್‌ ಬಳಸಬಹುದು ಎನ್ನಲಾಗಿದೆ.

18 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಲೇ ಬೇಕು ಎಂದು ಸಚಿವಾಲಯ ತಿಳಿಸಿದೆ. ಮಾಸ್ಕ್ ಧರಿಸುವುದು, ದೈಹಿಕ ಅಂತರ, ಕೈ ನೈರ್ಮಲ್ಯ ಮತ್ತು ಕೆಮ್ಮು ಬಂದಾಗ ಅಂತರ ಪಾಲನೆಯನ್ನು ಲಕ್ಷಣರಹಿತ, ಸೌಮ್ಯ, ಮಧ್ಯಮ ಮತ್ತು ತೀವ್ರ ರೋಗಿಗಳು ಕಡ್ಡಾಯವಾಗಿ ಅನುಸರಿಸಬೇಕು ಎಂದು ಹೇಳಲಾಗಿದೆ.


ಇದನ್ನೂ ಓದಿ: ಹೈದರಾಬಾದ್:‌ 3 ವರ್ಷದ ಮಗುವಿಗೆ ಮನಸೋ ಇಚ್ಚೆ ಥಳಿಸಿದ ಪೋಷಕರು- ಮೃತಪಟ್ಟ ಮಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...