Homeಕರ್ನಾಟಕವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರ ರಾವ್ ಅಮಾನತು

- Advertisement -
- Advertisement -

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಕರ್ತವ್ಯದಿಂದ ಅಮಾತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈಗಾಗಲೇ ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಚಾರಣೆ ನಡೆಸಿ ರಾಮಚಂದ್ರ ರಾವ್ ತಪ್ಪು ಎಸಗಿರುವುದು ಸಾಬೀತಾದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸೋಮವಾರ (ಜ.19) ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ರಾಮಚಂದ್ರ ರಾವ್ ಹೋಗಿದ್ದರು. ಆದರೆ, ಅವರನ್ನು ಭೇಟಿಯಾಗಲು ಸಚಿವರು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಕಚೇರಿಯಲ್ಲಿ ಕುಳಿತು ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ಹರಿದಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ಈ ಹಿಂದೆ ರಾಮಚಂದ್ರ ರಾವ್‌ ಅವರ ಮಲ ಮಗಳು ನಟಿ ರನ್ಯಾ ರಾವ್‌ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಾತಿ ಪ್ರಾತಿನಿಧ್ಯ’ ವಿಚಾರದಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿರುಕು?; ಭಾರೀ ಚರ್ಚೆಗೆ ಗ್ರಾಸವಾದ ಚನ್ನಿ ಹೇಳಿಕೆ

ಪಂಜಾಬ್ ಕಾಂಗ್ರೆಸ್‌ನಲ್ಲಿ ಜಾತಿ ಪ್ರಾತಿನಿಧ್ಯದ ಬಗ್ಗೆ ಸಂಘರ್ಷ ಭುಗಿಲೆದ್ದಿದೆ. ದಲಿತ ಮತ್ತು ಜಾಟ್ ಸಿಖ್ ಪ್ರಭಾವದ ನಡುವಿನ ಅಸಮತೋಲನದ ಮೇಲೆ ಕೇಂದ್ರೀಕೃತವಾಗಿರುವ ಈ ಘರ್ಷಣೆಯು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಲೋಕಸಭಾ ಸಂಸದ...

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌.ರವಿ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...