Homeಕರ್ನಾಟಕಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದರು.

ಕಚೇರಿಯಲ್ಲಿ ಕುಳಿತು ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ಹರಿದಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ಈ ಹಿಂದೆ ಡಿಜಿಪಿ ರಾಮಚಂದ್ರ ರಾವ್‌ ಅವರ ಮಲ ಮಗಳು ನಟಿ ರನ್ಯಾ ರಾವ್‌ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗ ಆಕೆಯ ಮಲ ತಂದೆಯದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್‌ ಆಗಿದೆ.

ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ

ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು.

ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ

ಶಾಸಕ ಜನಾರ್ದನ ರೆಡ್ಡಿಯವರು ಸಿಎಂ ಹಾಗೂ ಸಚಿವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಜನಾರ್ದನ ರೆಡ್ಡಿಯವರು ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿದ್ದು, ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿನ್ನೂ ನಡೆಯುತ್ತಿದೆ. ಅವರಿಗೆ ಆರೋಪಿಸಲು ಯಾವುದೇ ನೈತಿಕ ಅಧಿಕಾರವಿಲ್ಲ. ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವುದರಲ್ಲಿ ನಿರತವಾಗಿದ್ದು, ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಜನವರಿ 22ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು, ಅಧಿವೇಶನದಲ್ಲಿ ವಿರೋಧಪಕ್ಷಗಳು ಚರ್ಚೆ ನಡೆಸಲಿ ಎಂದು ಹೇಳಿದರು.

ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ : ವಾದ ಮಂಡಿಸಲು ಸಿದ್ದ

ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ ವಿಚಾರಣೆ ವಿಷಯ ಸುಪ್ರೀಂಕೋರ್ಟ್‌ನ ಮುಂದೆ ಬರಲಿರುವ ಬಗ್ಗೆ ಉತ್ತರಿಸಿದ ಸಿಎಂ, ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ಎಂದರು.

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ

ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕ ನಡೆಯಬೇಕು ಎಂಬ ಬೇಡಿಕೆ ಬಗ್ಗೆ ಉತ್ತರಿಸಿದ ಸಿಎಂ, ಸ್ಥಳೀಯ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ ಎಂದು ತಿಳಿಸಿದರು.

ಒಳಮೀಸಲಾತಿ ವಿಧೇಯಕ

ಒಳಮೀಸಲಾತಿ ವಿಧೇಯಕವನ್ನು ರಾಜ್ಯಪಾಲರು ಹಿಂದಿರುಗಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಧೇಯಕದ ಸಂಬಂಧ ರಾಜ್ಯಪಾಲರು ಕೇಳಿರುವ ಪ್ರಶ್ನೆಗಳಿಗೆ ಸೂಕ್ತ ವಿವರಣೆಗಳನ್ನು ನೀಡಲಾಗುವುದು ಎಂದರು.

ವರಿಷ್ಠರಿಂದ ಕರೆಬಂದಾಗ ನವದೆಹಲಿಗೆ ಪ್ರಯಾಣ

ನವದೆಹಲಿಗೆ ಭೇಟಿ ನೀಡುವ ಬಗ್ಗೆ ಉತ್ತರಿಸಿ, ಪಕ್ಷದ ವರಿಷ್ಠರಿಂದ ಭೇಟಿಗೆ ಕರೆಬಂದರೆ ನವದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...