Homeಕರ್ನಾಟಕಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದರು.

ಕಚೇರಿಯಲ್ಲಿ ಕುಳಿತು ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ಹರಿದಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದೆ.

ಈ ಹಿಂದೆ ಡಿಜಿಪಿ ರಾಮಚಂದ್ರ ರಾವ್‌ ಅವರ ಮಲ ಮಗಳು ನಟಿ ರನ್ಯಾ ರಾವ್‌ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗ ಆಕೆಯ ಮಲ ತಂದೆಯದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್‌ ಆಗಿದೆ.

ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ

ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು.

ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ

ಶಾಸಕ ಜನಾರ್ದನ ರೆಡ್ಡಿಯವರು ಸಿಎಂ ಹಾಗೂ ಸಚಿವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಜನಾರ್ದನ ರೆಡ್ಡಿಯವರು ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿದ್ದು, ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿನ್ನೂ ನಡೆಯುತ್ತಿದೆ. ಅವರಿಗೆ ಆರೋಪಿಸಲು ಯಾವುದೇ ನೈತಿಕ ಅಧಿಕಾರವಿಲ್ಲ. ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವುದರಲ್ಲಿ ನಿರತವಾಗಿದ್ದು, ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಜನವರಿ 22ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು, ಅಧಿವೇಶನದಲ್ಲಿ ವಿರೋಧಪಕ್ಷಗಳು ಚರ್ಚೆ ನಡೆಸಲಿ ಎಂದು ಹೇಳಿದರು.

ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ : ವಾದ ಮಂಡಿಸಲು ಸಿದ್ದ

ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ ವಿಚಾರಣೆ ವಿಷಯ ಸುಪ್ರೀಂಕೋರ್ಟ್‌ನ ಮುಂದೆ ಬರಲಿರುವ ಬಗ್ಗೆ ಉತ್ತರಿಸಿದ ಸಿಎಂ, ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ಎಂದರು.

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ

ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕ ನಡೆಯಬೇಕು ಎಂಬ ಬೇಡಿಕೆ ಬಗ್ಗೆ ಉತ್ತರಿಸಿದ ಸಿಎಂ, ಸ್ಥಳೀಯ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ ಎಂದು ತಿಳಿಸಿದರು.

ಒಳಮೀಸಲಾತಿ ವಿಧೇಯಕ

ಒಳಮೀಸಲಾತಿ ವಿಧೇಯಕವನ್ನು ರಾಜ್ಯಪಾಲರು ಹಿಂದಿರುಗಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಧೇಯಕದ ಸಂಬಂಧ ರಾಜ್ಯಪಾಲರು ಕೇಳಿರುವ ಪ್ರಶ್ನೆಗಳಿಗೆ ಸೂಕ್ತ ವಿವರಣೆಗಳನ್ನು ನೀಡಲಾಗುವುದು ಎಂದರು.

ವರಿಷ್ಠರಿಂದ ಕರೆಬಂದಾಗ ನವದೆಹಲಿಗೆ ಪ್ರಯಾಣ

ನವದೆಹಲಿಗೆ ಭೇಟಿ ನೀಡುವ ಬಗ್ಗೆ ಉತ್ತರಿಸಿ, ಪಕ್ಷದ ವರಿಷ್ಠರಿಂದ ಭೇಟಿಗೆ ಕರೆಬಂದರೆ ನವದೆಹಲಿಗೆ ತೆರಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...