Homeಕರ್ನಾಟಕಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ....

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

2026 ಜನವರಿ 20, ಮಂಗಳವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ತನಿಖೆಯ ನಂತರ ಏನು ಬೇಕಾದರೂ ಆಗಬಹುದು. ಅವರನ್ನು ವಜಾಗೊಳಿಸಬಹುದು. ತಕ್ಷಣ ಕ್ರಮ ಕೈಗೊಳ್ಳಬೇಕಾಗಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅವರು ಹಿರಿಯ ಅಧಿಕಾರಿ ಎಂಬ ಅಂಶವನ್ನು ನೋಡದೆ, ಯಾವುದೇ ಹಿಂಜರಿಕೆಯಿಲ್ಲದೆ ಕ್ರಮ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನಾಗುತ್ತದೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದಕ್ಕಾಗಿಯೇ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. 

ಮುಖ್ಯಮಂತ್ರಿ ಕೂಡ ಅಸಮಾಧಾನಗೊಂಡಿದ್ದಾರೆ, ನನಗೂ ಅಸಮಾಧಾನವಿದೆ. ಇದು ಪೊಲೀಸ್ ಇಲಾಖೆಯಾಗಿರುವುದರಿಂದ ಖಂಡಿತಾ ಇಂತಹ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. 

ನಿನ್ನೆ ವಿಡಿಯೊ ವೈರಲ್ ಆದ ಬೆನ್ನಲ್ಲೇ ತಮ್ಮನ್ನು ಭೇಟಿ ಮಾಡಲು ರಾಮಚಂದ್ರ ರಾವ್ ಬಂದಿದ್ದರು ಎಂದು ಆಮೇಲೆ ಗೊತ್ತಾಯಿತು. ಆದರೆ ಇಂತಹ ಪರಿಸ್ಥಿತಿಯಲ್ಲಿ ನಾನು ಖಂಡಿತಾ ಅವರನ್ನು ಭೇಟಿ ಮಾಡುತ್ತಿರಲಿಲ್ಲ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿ ಇಂತಹ ನೀಚ ಕೆಲಸ ಮಾಡಿದ್ದರೆ ಅದನ್ನು ಖಂಡಿತಾ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ಡಿಜಿಪಿ ರಾಮಚಂದ್ರ ರಾವ್ ಅವರು ಇದೇ ವರ್ಷ ಮೇ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗುವವರಿದ್ದರು. ವೈರಲ್ ವಿಡಿಯೊದಲ್ಲಿ ರಾಮಚಂದ್ರ ರಾವ್ ಅವರ ಸಂಪರ್ಕದಲ್ಲಿದ್ದ ಮಹಿಳೆಯರು ಯಾರು ಎಂದು ಇದುವರೆಗೆ ಗೊತ್ತಾಗಿಲ್ಲ, ಯಾರೂ ಇದುವರೆಗೆ ದೂರು ನೀಡಿಲ್ಲ. ಆ ಬಗ್ಗೆ ಕೂಡ ತನಿಖೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಕೃತಕ ವಿಡಿಯೊ ಎಂದ ಡಿಜಿಪಿ

ಸೋಮವಾರ ಮಧ್ಯಾಹ್ನ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ತಮ್ಮ ಕಚೇರಿಯನ್ನು ದಿಢೀರ್‌ ತೊರೆದ ರಾಮಚಂದ್ರರಾವ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗೃಹ ಸಚಿವರು ಅನಾರೋಗ್ಯದ ಕಾರಣ ಹೇಳಿ ಭೇಟಿಗೆ ಅವಕಾಶ ನೀಡಿಲ್ಲ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಡಿಜಿಪಿ ರಾಮಚಂದ್ರರಾವ್‌, ‘ವಿಡಿಯೊ ಕಂಡು ಆಘಾತ­ವಾಗಿದೆ. ವೈರಲ್‌ ಆದ ವಿಡಿಯೊ ಕೃತಕವಾಗಿ ಸೃಷ್ಟಿಸ­ಲಾಗಿದೆ. ಈ ಬಗ್ಗೆ ತನಿಖೆಯಾಗಬೇಕಿದೆ ಎಂದರು.

‘ಷಡ್ಯಂತ್ರ ರೂಪಿಸಿ ನಕಲಿ ವಿಡಿಯೊ ಹರಿಬಿಡಲಾಗಿದೆ. ಈ ಬಗ್ಗೆ ವಕೀಲರ ಜತೆ ಚರ್ಚೆ ನಡೆಸಿ ಕಾನೂನು ಹೋರಾಟ ನಡೆಸುತ್ತೇನೆ,’ ‘ಇದು ಹಳೆಯ ವಿಡಿಯೊ,’ ಎಂದ ರಾಮಚಂದ್ರ ರಾವ್‌, ‘ಎಂಟು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಕೆಲಸ ಮಾಡಿದ್ದೆ,’ ಎಂದಷ್ಟೇ ಹೇಳಿ ಘಟನೆ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...