HomeಅಂಕಣಗಳುKarnataka against SIRನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

- Advertisement -
- Advertisement -

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ ಪತ್ರಕರ್ತರಾದ ಚಂದ್ರು ತರಹುಣಿಸೆ ಮಾತನಾಡಿಸಿ SIR ಎಂಬುದು ಜನರ ಮೇಲೆ ತೂಗುಗತ್ತಿ ತರುತ್ತಿದೆ. ಇದು ಯಾವುದೂ ಒಂದು ಸಮುದಾಯಕ್ಕೆ ಆಗುವ ಸಮಸ್ಯೆಯಲ್ಲ, ಇದು ಎಲ್ಲಾ ಜನರನ್ನು ದ್ವಿತೀಯ ದರ್ಜೆಯ ನಾಗರಿಕರನ್ನಾಗಿ ಮಾಡುವ ಇಂದು ದೊಡ್ಡ ಜನವಿರೋಧಿ ಕೃತ್ಯ ಎಂದು ವಿವರಿಸಿದರು.

ಮನುಜ ಮತ ಬಳಗದ ಅಧ್ಯಕ್ಷರಾದ ಡಿ.ಹೆಚ್. ಕಂಬಳಿ ಮಾತನಾಡುತ್ತಾ, ನಾವು ಸಂವಿಧಾನವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಇಡೀ ಸಮಯದಲ್ಲಿ SIR ಎಂದು ನಮ್ಮನ್ನು ನೀವು ಈ ದೇಶದ ಪ್ರಜೆಗಳೇ ಅಲ್ಲ ಹಾಗಾಗಿ ನೀವು ಸಂವಿಧಾನದ ಕುರಿತು ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ.

ಇದು ಬಿಜೆಪಿ ಹಾಗೂ ಆರೆಸ್ಸೆಸ್ ನ ದ್ವೇಷ ಸಿದ್ಧಾಂತದ ಭಾಗವೇ ಆಗಿದೆ. ಈ ಜನವಿರೋಧಿ ಸಿದ್ಧಾಂತವು ಮೇಲುಗೈ ಸಾಧಿಸಲು ನಾವು ಬಿಡಬಾರದು. ಈ ದೇಶವನ್ನು, ಸಂವಿಧಾನವನ್ನು ಹಾಗೂ ದೇಶದ ಜನರನ್ನೂ ಬಿಜೆಪಿಯ ಮುಷ್ಟಿಯಿಂದ ಬಿಡುಗಡೆಗೊಳಿಸಲು ಸ್ಮಾನಮಾನಕರೆಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕಿದೆ.

ಈ ಜಾಗೃತಿ ಜಾಥಾ ಮುಂತಾದವುಗಳಿಂದ ನೀರ ನುಕೂಲ್ ಪಡೆದುಕೊಳ್ಳುವ ಕಾಂಗ್ರೆಸ್ ಪಕ್ಷವು ಬೀದಿಗಿಳಿದು SIR ದುಷ್ಕೃತ್ಯವನ್ನು ಎದುರಿಸಬೇಕಿದೆ. ಆದರೆ ಕಾಂಗ್ರೆಸ್ ಪಕ್ಷ ಇನ್ನೂ ನಿದ್ರಾವಸ್ತೆಯಲ್ಲಿದೆ. ಇದು ಈ ದೇಶದ ದುರಂತ.

ಈ ಜಾಥಾ ಕೇವಲ ಆರಂಭ ಮಾತ್ರವೇ. ಮುಂದಿನ ದಿನಗಳಲ್ಲಿ SIR ಕುರಿತು ಬಹಳ ದೊಡ್ಡ ಸಂಘರ್ಷಕ್ಕೆ ಕರುನಾಡು ಸಾಕ್ಷಿಯಾಗಲಿದೆ. ಎಂದು ವಿವರಿಸಿದರು.

ಜಮಾತ್ ಎ ಇಸ್ಲಾಂ ಹಿಂದ್ ನ ಟಿ ಹುಸೇನ್ ಸಾಬ್ ಮಾತನಾಡುತ್ತಾ, SIR ಪ್ರಕ್ರಿಯೆಯಿಂದ ಈ ದೇಶದಲ್ಲಿನ ಎಲ್ಲ ಜಾತಿಗಳ ಜನರಿಗೂ ಸಮಸ್ಯೆಯಾಗುತ್ತದೆ, ಈ ಹಿಂದೆ CAA- NRC ತಂದಿದ್ದರು. ಆಗ ಅದನ್ನು ಎಲ್ಲರೂ ಪ್ರತಿಭಟಿಸಿ ಹಿಮ್ಮೆಟ್ಟಿಸಿದೆವು. ಆದರೆ ಈಗ ಬೇರೊಂದು ರೂಪದಲ್ಲಿ ಮತ್ತೆ ತರುತ್ತಿದ್ದಾರೆ. ಇದನ್ನೂ ಪ್ರಬಲವಾಗಿ ಪ್ರತಿಭಟಿಸಿ ಹಿಮ್ಮೆಟ್ಟಿಸೋಣ ಎಂದರು.

ಸಭೆಯಲ್ಲಿ ಬಸವರಾಜ್ ಬಾದರ್ಲಿ, ಶರಣಪ್ಪ ಟೆಂಗಿನಕಾಯಿ, ಖಾಜಿ ಮಲ್ಲಿಖ್ ಅದ್ಯಕ್ಷರು ಬ್ಲಾಕ್ ಕಾಂಗ್ರೆಸ್, ಮಂಜುನಾಥ್ ಗಾಂಧಿನಗರ, ಬಿ.ಎನ್ ಯರದಿಹಾಳ, ಬೀಮಣ್ಣ ನಗನೂರು, ಡಾ.ವಸಿಂ ಅಹ್ಮದ್ ಅನೀಲ್ ಕುಮಾರ್ ಕಾಂಗ್ರೆಸ್ ಮುಖಂಡರು ಅಭಿಲೇಶ್ ನಾಯ್ಕ ಹಾಜರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...