Homeಮುಖಪುಟ'ಧಂಗರ್' ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

‘ಧಂಗರ್’ ಮೀಸಲಾತಿ ಕುರಿತ ಮಾತುಕತೆ ವಿಫಲ: ಪ್ರತಿಭಟನೆ ತೀವ್ರಗೊಳಿಸಲು ಮುಂದಾದ ಸಮುದಾಯ

- Advertisement -
- Advertisement -

ಧಂಗರ್ ಮೀಸಲಾತಿ ಕುರಿತು ಗುರುವಾರ ನಡೆದ ಮಾತುಕತೆ ವಿಫಲವಾಗಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಹೆಚ್ಚಿನ ಸಮಯವನ್ನು ಕೋರಿದರೆ, ಧಂಗರ್ ಸಮುದಾಯದ ಕಾರ್ಯಕರ್ತರು ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ನೀಡಲು ಸಿದ್ಧರಿಲ್ಲ ಮತ್ತು ತಮ್ಮ ಪ್ರತಿಭಟನೆ ತೀವ್ರಗೊಳಿಸುವುದಾಗಿ ಹೇಳಿದ್ದಾರೆ.

ಧಂಗರ್ ಸಮುದಾಯವು ‘ಪರಿಶಿಷ್ಟ ಪಂಗಡ’ (ST) ಪಟ್ಟಿಯ ಭಾಗವಾಗಿಲ್ಲ. ಬದಲಾಗಿ ‘ಧಂಗಡ್’ ಎಂದು ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಧಂಗರ್ ಸಮುದಾಯದ ಮುಖಂಡರು ಹಲವಾರು ವರ್ಷಗಳಿಂದ ಮಹಾರಾಷ್ಟ್ರ ಸರಕಾರದ ಬಳಿ ‘ಧಂಗಡ್’ ಎಂಬ ಶೀರ್ಷಿಕೆಯ ಯಾವುದೇ ಸಮುದಾಯ ಇಲ್ಲ ಮತ್ತು ಪಟ್ಟಿಯಲ್ಲಿ ನಮೂದನ್ನು ತಪ್ಪಾಗಿ ಬರೆಯಲಾಗಿದೆ ಎಂದು ಹೇಳಿದ್ದರು.

ಸರ್ಕಾರ ಅದನ್ನು ಸರಿಪಡಿಸಿ ‘ಧಂಗಡ್’ ಬದಲು ‘ಧಂಗರ್’ ಸಮುದಾಯಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಈ ವಿಚಾರವಾಗಿ ಈ ಮೊದಲು ಪ್ರತಿಭಟನೆ ನಡೆದಿತ್ತು. ಈ ವೇಳೆ ಸಮುದಾಯಕ್ಕೆ ಸರಕಾರದಿಂದ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆಯಲಾಗಿತ್ತು. ಆದರೆ ಮರಾಠ ಮೀಸಲಾತಿಗೆ ನಡೆದ ಹೋರಾಟದ ವಿಚಾರದಲ್ಲಿ ಸರಕಾರ ತ್ವರಿತ ಕ್ರಮಕೊಂಡ ನಂತರ ಧಂಗರ್ ಸಮುದಾಯವೂ ತಮ್ಮ ಪ್ರತಿಭಟನೆ ಪುನರಾರಂಭಿಸಿದೆ.

ಅಹ್ಮದ್‌ನಗರ ಜಿಲ್ಲೆಯ ಚೋಂಡಿಯಲ್ಲಿ ಕಳೆದ ಆರು ದಿನಗಳಿಂದ ಹಿರಿಯ ಧಂಗರ್ ನಾಯಕ ಸುರೇಶ್ ಬಂಡಗರ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಮತ್ತು ಇತರ ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಮುಂಬೈನ ಸಹ್ಯಾದ್ರಿ ರಾಜ್ಯ ಅತಿಥಿಗೃಹದಲ್ಲಿ ಸಭೆ ನಡೆದಿದೆ. ಆದರೆ ಸಭೆಯಲ್ಲಿ  ಪೂರಕ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಸರ್ಕಾರದ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸಮಸ್ಯೆಯ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ. ಎರಡು ದಿನಗಳಲ್ಲಿ ಸಮಿತಿಯನ್ನು ರಚಿಸಲಾಗುವುದು ಮತ್ತು ಸರ್ಕಾರ ಹೇಳಿದಂತೆ ಎರಡು ತಿಂಗಳೊಳಗೆ ಸಮಸ್ಯೆಯನ್ನು ಪರಿಹರಿಸಲಾಗುವುದು. ಸಮಿತಿಯು ರಾಜ್ಯಗಳಲ್ಲಿ ಪ್ರವಾಸ ಮಾಡಿ ತನ್ನ ವರದಿಯನ್ನು ಸಿದ್ಧಪಡಿಸುತ್ತದೆ ಎಂದು ಹೇಳಿದ್ದಾರೆ.

ಯಶವಂತ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಬಾಳಾಸಾಹೇಬ ದೊಡ್ತೊಳೆ ಮಾತನಾಡಿ,  ಮೂರು ತಿಂಗಳೊಳಗೆ ಅಧ್ಯಯನ ಮಾಡಿ ಸಮುದಾಯದ ಬೇಡಿಕೆಗಳಿಗೆ ನ್ಯಾಯ ಒದಗಿಸುವುದಾಗಿ ಸರ್ಕಾರ ಹೇಳಿದೆ. ಆದರೆ ಇದು ಹೆಚ್ಚು ಸಮಯ ತೆಗೆದುಕೊಳ್ಳುವ  ಪ್ರಕ್ರಿಯೆ. ಆದ್ದರಿಂದ ನಾವು ಉಪವಾಸವನ್ನು ಮುಂದುವರಿಸಲು ಮತ್ತು ನಮ್ಮ ಬೇಡಿಕೆಗಳ ಕಡೆಗೆ  ಆಂದೋಲನವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಕೇವಲ ಸಕಾರಾತ್ಮಕತೆ ಮತ್ತು ಸಿಹಿ ಮಾತುಗಳು ಕಳೆದ 70 ವರ್ಷಗಳಿಂದ ಧಂಗರ್ ಸಮುದಾಯಕ್ಕೆ ನ್ಯಾಯವನ್ನು ತಂದುಕೊಟ್ಟಿಲ್ಲ. ಇಂದು ಅದೇ ಪುನರಾವರ್ತನೆಯಾಗಿದೆ. ಸರ್ಕಾರ ಈ ಸಮಸ್ಯೆಯನ್ನು ಸಕಾರಾತ್ಮಕವಾಗಿ ನೋಡುತ್ತಿದೆ ಆದರೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಟ ಮುಂದುವರಿಸಲು ನಿರ್ಧರಿಸಿದ್ದೇವೆ. ಈಗಾಗಲೇ ಆಮರಣಾಂತ ಉಪವಾಸ ನಡೆಯುತ್ತಿದ್ದು, ಅದನ್ನು ತೀವ್ರಗೊಳಿಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ಧಂಗರ್ ಸಮುದಾಯದ ವಿರುದ್ಧವಾಗಿದೆ. ಅವರು ನಮ್ಮ ಸಮುದಾಯಕ್ಕೆ ಕೋಟಾ ನೀಡಲು ಬಯಸುವುದಿಲ್ಲ. ನಾನು ಕಳೆದ 10 ವರ್ಷಗಳಿಂದ ಇದನ್ನು ನೋಡುತ್ತಿದ್ದೇನೆ. ನನ್ನ ಸಮುದಾಯಕ್ಕಾಗಿ ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ. ಆದರೆ ನಾನು ಹೋರಾಟವನ್ನು ನಿಲ್ಲಿಸುವುದಿಲ್ಲ, ನಾನು ಆಮರಣಾಂತ ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಬಂಡಗರ್ ಅವರು ಹೇಳಿದ್ದಾರೆ.

ಇದನ್ನು ಓದಿ: NDA ಆಡಳಿತದ 16 ರಾಜ್ಯಗಳಲ್ಲಿ ಒಬ್ಬರೇ ಒಬ್ಬ ಮಹಿಳಾ ಸಿಎಂಗಳಿಲ್ಲ: ಡೆರೆಕ್ ಓಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...