Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...