Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...