Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...