Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...