Homeಮುಖಪುಟವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

ವೈಯಕ್ತಿಕ ಸಿಬ್ಬಂದಿಯನ್ನು ಸ್ಥಾಯಿಸಮಿತಿಗೆ ನೇಮಿಸಿದ ಧನಕರ್‌; ‘ಕಾನೂನುಬಾಹಿರ’ ಎಂದ ಪ್ರತಿಪಕ್ಷಗಳು

- Advertisement -
- Advertisement -

ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಕಚೇರಿಯಲ್ಲಿರುವ ಎಂಟು ಅಧಿಕಾರಿಗಳನ್ನು ಸಂಸತ್ತಿನ ಮೇಲ್ಮನೆಯ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾಯಿ ಸಮಿತಿಗಳು ಮತ್ತು ಇತರ ಸಂಸದೀಯ ಸಮಿತಿಗಳಿಗೆ ನೇಮಕ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಜಗದೀಪ್ ಧನಕರ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳನ್ನು 12 ಸಂಸದೀಯ ಸ್ಥಾಯಿ ಸಮಿತಿಗಳು ಮತ್ತು ಎಂಟು ಇಲಾಖಾ ಸ್ಥಾಯಿ ಸಮಿತಿಗಳಿಗೆ  ನೇಮಿಸಿರುವ ನಿರ್ಧಾರವನ್ನು ಟೀಕಾಕಾರರು ಮತ್ತು ವಿರೋಧ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ. ಇದು ‘ಸಾಂಸ್ಥಿಕ ವಿಧ್ವಂಸಕತೆ’ ಮತ್ತು ‘ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ್ದು, ಜಗದೀಪ್ ಧನಕರ್ ಅವರ ಕಚೇರಿಯ ಸಿಬ್ಬಂದಿಗಳಾದ, ವಿಶೇಷ ಕರ್ತವ್ಯದ ಅಧಿಕಾರಿ (OSD) ರಾಜೇಶ್ ಎನ್ ನಾಯಕ್, ಖಾಸಗಿ ಕಾರ್ಯದರ್ಶಿ (PS) ಸುಜೀತ್ ಕುಮಾರ್, ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಂಜಯ್ ವರ್ಮಾ ಮತ್ತು OSD ಅಭ್ಯುದಯ್ ಸಿಂಗ್ ಶೇಖಾವತ್, ಅವರ OSDಗಳಾದ ಅಖಿಲ್ ಚೌಧರಿ, ದಿನೇಶ್ ಡಿ, ಕೌಸ್ತುಭ್ ಸುಧಾಕರ್ ಭಲೇಕರ್ ಮತ್ತು PS ಅದಿತಿ ಚೌಧರಿ ಅವರನ್ನು ರಾಜ್ಯಸಭಾ ಅಧ್ಯಕ್ಷರ ಕಚೇರಿಯಿಂದ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಗಿದೆ.

2021ರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು ಈಗ ಮುನ್ನೆಲೆಗೆ ಬಂದಿದೆ. ”ಜಗದೀಪ್ ಧನಕರ್ ಅವರ ಕುಟುಂಬದ ಸದಸ್ಯರೆಲ್ಲರನ್ನು ಬಂಗಾಳ ರಾಜಭವನದಲ್ಲಿ ವಿಶೇಷ ಕರ್ತವ್ಯ ಅಥವಾ ಒಎಸ್‌ಡಿಗಳನ್ನಾಗಿ ನೇಮಿಸಲಾಗಿದೆ” ಎಂದು ಅವರು ದೂರಿದ್ದರು. ಆಗ ಜಗದೀಪ್ ಧನಕರ್ ಅವರು ಬಂಗಾಳದ ರಾಜ್ಯಪಾಲರಾಗಿದ್ದರು.

“ಇಂತಹ ಕ್ರಮವು ಈ ಹಿಂದೆ ಯಾವತ್ತೂ ಘಟಿಸಿರಲಿಲ್ಲ” ಎಂದು ಹೆಸರು ಹೇಳಲಿಚ್ಛಿಸದ ರಾಜ್ಯಸಭಾ ಸಂಸದರೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಇದೇ ಆರೋಪವನ್ನು ಮಾಡಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರೂ ಟ್ವೀಟ್‌ ಮಾಡಿದ್ದಾರೆ.

”ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸ್ಥಾಯಿ ಸಮಿತಿಗಳಲ್ಲಿ ತಮ್ಮ ಸಿಬ್ಬಂದಿಯನ್ನು ನೇಮಿಸುತ್ತಾರೆ.
ಹೌದು ಇದು ಅಭೂತಪೂರ್ವ (ಹಿಂದೆಂದೂ ಘಟಿಸಿರಲಿಲ್ಲ). ಆದರೆ ನೀಡಿರುವ ವಿವರಣೆಯೂ ಸೂಕ್ತವಾಗಿಲ್ಲ. ಅಸ್ತಿತ್ವದಲ್ಲಿರುವ ರಾಜ್ಯಸಭೆಯ ಸೆಕ್ರೆಟರಿಯಟ್‌ ಸಿಬ್ಬಂದಿಯ ಮೇಲೆ ಅಧ್ಯಕ್ಷರಿಗಿರುವ ವಿಶ್ವಾಸದ ಕೊರತೆಯನ್ನು ಇದು ತೋರಿಸುವುದಿಲ್ಲವೇ?” ಎಂದು ದಿಗ್ವಿಜಯ ಸಿಂಗ್ ಪ್ರಶ್ನೆ ಮಾಡಿದ್ದಾರೆ.

ಖ್ಯಾತ ವಕೀಲರಾದ ಪ್ರಶಾಂತ್ ಭೂಷಣ್ ಅವರು ಟ್ವೀಟ್‌ ಮಾಡಿದ್ದು, “ಇದು ಕಾನೂನುಬಾಹಿರ ಕ್ರಮ” ಎಂದು ಕರೆದಿದ್ದಾರೆ. “ಮಂಗಳವಾರ ರಾಜ್ಯಸಭಾ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದ ಆದೇಶದ ಪ್ರಕಾರ ರಾಜ್ಯಸಭಾ ವ್ಯಾಪ್ತಿಯಲ್ಲಿ ಬರುವ 20 ಸಮಿತಿಗಳಿಗೆ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರ ವೈಯಕ್ತಿಕ ಸಿಬ್ಬಂದಿಯ 8 ಸದಸ್ಯರನ್ನು ನೇಮಿಸಲಾಗಿದೆ. ಇದು ನಮಗೆ ಅಚ್ಚರಿ ಮೂಡಿಸಿದೆ” ಎಂದು ಟೀಕಿಸಿದ್ದಾರೆ. ಸಂಪೂರ್ಣವಾಗಿ ಅಕ್ರಮ ಮತ್ತು ಅಧಿಕಾರ ದುರುಪಯೋಗ ಧನಕರ್‌ ಅವರಿಂದ ನಡೆದಿದೆ ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ನ ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ಪ್ರತಿಕ್ರಿಯಿಸಿ, “ಉಪರಾಷ್ಟ್ರಪತಿಯವರು ಕೌನ್ಸಿಲ್ ಆಫ್ ಸ್ಟೇಟ್ಸ್ ಎಕ್ಸ್-ಆಫಿಶಿಯೋ ಅಧ್ಯಕ್ಷರಾಗಿದ್ದಾರೆ. ಸಂಸದೀಯ ಸ್ಥಾಯಿ ಸಮಿತಿಗಳಲ್ಲಿ ಅವರು ವೈಯಕ್ತಿಕ ಸಿಬ್ಬಂದಿಯನ್ನು ಹೇಗೆ ನೇಮಿಸಲು ಸಾಧ್ಯ? ಇದು ಸಾಂಸ್ಥಿಕ ವಿಧ್ವಂಸಕತೆಗೆ ಸಮಾನವಾಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...