Homeಮುಖಪುಟಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ - ರಾಜ್ಯಸಭೆ ಅಧಿವೇಶನ ಡಿಸೆಂಬರ್ 16...

ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ – ರಾಜ್ಯಸಭೆ ಅಧಿವೇಶನ ಡಿಸೆಂಬರ್ 16 ಕ್ಕೆ ಮುಂದೂಡಿಕೆ

- Advertisement -
- Advertisement -

ರಾಜ್ಯಸಭಾ ಸ್ಪೀಕರ್ ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಆಡಳಿತರೂಢ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆಯನ್ನು ಡಿಸೆಂಬರ್ 16 ಕ್ಕೆ ಶುಕ್ರವಾರ ಮುಂದೂಡಲಾಗಿದೆ. ಪ್ರತಿಪಕ್ಷಗಳು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿದ್ದಂತೆ ಕೋಲಾಹಲ ಉಂಟಾಗಿದ್ದು, ಆದರೆ ಆಡಳಿತರೂಢ ಪಕ್ಷಗಳು ಆಕ್ಷೇಪಿಸಿದವು. ಈ ವೇಳೆ ಸದನದಲ್ಲಿ ಗೊಂದಲ ಉಂಟಾಗಿ ಕಲಾಪ ಮುಂದೂಡಿಕೆಗೆ ಕಾರಣವಾಯಿತು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರನ್ನು ‘ಅತ್ಯಂತ ಪಕ್ಷಪಾತಿ’ ಎಂದು ಆರೋಪಿಸಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಅವಿಶ್ವಾಸ ನಿರ್ಣಯದ ನೋಟಿಸ್ ಅನ್ನು ಮಂಡಿಸಿವೆ. ಗದ್ದಲದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಧನಕರ್ ಅವಕಾಶ ನೀಡಿದ್ದಾರೆ. ಧನಕರ್ ವಿರುದ್ಧದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತರೂಢ ಪೀಠದಿಂದ ಸಂಸದರಿಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡುವ ಮೂಲಕ ಸಭಾಪತಿಗಳು ಒಲವು ತೋರುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಕಾಂಗ್ರೆಸ್‌ಗೆ ಅಗೌರವ ತೋರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಧನಕರ್ ಅವರು ಖರ್ಗೆ ಮತ್ತು ಸಭಾನಾಯಕ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ನಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. ನಂತರ ಅವರು ಡಿಸೆಂಬರ್ 16 ಕ್ಕೆ ಕಲಾಪವನ್ನು ಮುಂದೂಡಿದ್ದಾರೆ.

ಈ ನಡುವೆ, ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ಇದನ್ನೂ ಓದಿ: ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...