Homeಮುಖಪುಟ'ಖರ್ಗೆ ಬದಲಿಗೆ ಜೈರಾಮ್ ನಾಯಕರಾಗಲಿ' ಎಂದ ಧನಖರ್; 'ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಹೋಗಿಲ್ಲ' ಎಂದು...

‘ಖರ್ಗೆ ಬದಲಿಗೆ ಜೈರಾಮ್ ನಾಯಕರಾಗಲಿ’ ಎಂದ ಧನಖರ್; ‘ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಹೋಗಿಲ್ಲ’ ಎಂದು ಕಿಡಿಕಾರಿದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

‘ಕಾಂಗ್ರೆಸ್ ಸಂಸದರನ್ನು ಶಿಸ್ತುಬದ್ಧಗೊಳಿಸಲು ಸದನದಲ್ಲಿ ಖರ್ಗೆ ಸ್ಥಾನವನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ತೆಗೆದುಕೊಳ್ಳಬೇಕು” ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಹೇಳಿದಾಗ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು. “ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಇನ್ನೂ ಹೋಗಿಲ್ಲ” ಎಂದು ತಿರುಗೇಟು ನೀಡಿದರು.

ಸಭಾಪತಿಯವರು “ವರ್ಣ” (ಜಾತಿ) ವ್ಯವಸ್ಥೆಯನ್ನು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ತಿರುಗೇಟು ನೀಡಿದರು. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಧನಖರ್ ಅವರು ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಅವರಿಗೆ ಪರಿಶೀಲಿಸದ ಸಂಗತಿಗಳನ್ನು ಹೇಳಬೇಡಿ ಎಂದು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು.

ಇದನ್ನು ದೃಢೀಕರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದರು. ಸದನದಲ್ಲಿ ಯಾವುದೇ ಸದಸ್ಯರು ಮಾತನಾಡುವಾಗ ಅಡ್ಡಿಪಡಿಸಬೇಡಿ ಎಂದು ರಮೇಶ್‌ಗೆ ಸಭಾಪತಿ ಸಲಹೆ ನೀಡಿದರು. ಪೀಠದ ಸಲಹೆಯನ್ನು ರಮೇಶ್ ಕಡೆಗಣಿಸಿದ್ದರಿಂದ ಬೇಸರಗೊಂಡ ಧನಖರ್, “ಹಿರಿಯ ನಾಯಕತ್ವ (ಖರ್ಗೆ) ಇಲ್ಲಿದ್ದಾರೆ. ನೀವು (ರಮೇಶ್) ಅವರ (ಖರ್ಗೆ) ಬದಲಿಗೆ ವಿಪಕ್ಷ ನಾಯಕರಾಗಬೇಕು; ಅವರ ಕೆಲಸ ನೀವು ಮಾಡುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ… ನೀವು ತುಂಬಾ ಬುದ್ಧಿವಂತರು, ತುಂಬಾ ಪ್ರತಿಭಾವಂತರು, ನೀವು ತಕ್ಷಣ ಬಂದು ಆಸನದಲ್ಲಿ ಕುಳಿತುಕೊಳ್ಳಬೇಕು” ಎಂದರು.

ಸಿಟ್ಟಾದ ಖರ್ಗೆ, ಸಭಾಪತಿಗಳ ವಿರುದ್ಧ ಕೆಂಡಾಮಂಡಲರಾದರು’ “ವರ್ಣ ವ್ಯವಸ್ಥೆ ತರಬೇಡಿ…ಅದಕ್ಕಾಗಿಯೇ ರಮೇಶ್ ಅವರನ್ನು ಬುದ್ದಿವಂತ ಎಂದು ಕರೆಯುತ್ತಿದ್ದೀರಿ… ನಾನು ದಡ್ಡ ಎನ್ನುತ್ತಿದ್ದೀರಿ” ಎಂದು ಖರ್ಗೆ ತಿರುಗೇಟು ನೀಡಿದರು. ಅವರು ತಮ್ಮ ರಾಜಕೀಯ ಸ್ಥಾನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಮತದಾರರಿಗೆ ಕಾರಣವೆಂದು ಹೇಳುವ ಮೂಲಕ ತಮ್ಮ ಸ್ಥಾನವನ್ನು ಸಮರ್ಥಿಸಿಕೊಂಡರು, ಸಾರ್ವಜನಿಕ ಸೇವೆಯಲ್ಲಿ ಅವರ ಸಾಧನೆಗಳನ್ನು ಒತ್ತಿಹೇಳಿದರು. “ನನ್ನನ್ನು ಈ ಸ್ಥಾನಕ್ಕೆ ಏರಿಸಿದ ಜನರು ಇಲ್ಲಿ ಕುಳಿತಿದ್ದಾರೆ” ಎಂದು ಖರ್ಗೆ ಅವರು ಪಕ್ಕದಲ ಆಸನದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರತ್ತ ದೃಷ್ಟಿ ಹಾಯಿಸಿದರು.

ಇದನ್ನು ಕೇಳಿದ ನಂತರ ಕೋಪಗೊಂಡ ಧನಖರ್, ಖರ್ಗೆ ಅವರ ಹೇಳಿಕೆಯನ್ನು “ತಿರುಚಿದ” ಎಂದು ಆರೋಪಿಸಿದರು. ನೀವು ನನ್ನ ಹೇಳಿಕೆ ಎಂದಿಗೂ ಅರ್ಥಮಾಡಿಕೊಂಡಿಲ್ಲ ಎಂದು ಹೇಳಿದರು. ಸಂಸದೀಯ ಪ್ರಜಾಪ್ರಭುತ್ವ ಮತ್ತು ರಾಜ್ಯಸಭೆಯ ಕಲಾಪಗಳ ಇತಿಹಾಸದಲ್ಲಿ ಕುರ್ಚಿಯ ಬಗ್ಗೆ ಇಂತಹ ನಿರ್ಲಕ್ಷ್ಯ ನಡೆದಿರಲಿಲ್ಲ ಎಂದು ಅವರು ಹೇಳಿದರು.

“ಆರ್‌ಎಸ್‌ಎಸ್ ತಮ್ಮ ಸದಸ್ಯರನ್ನು ಉಪಕುಲಪತಿಗಳು ಮತ್ತು ಪ್ರಾಧ್ಯಾಪಕರನ್ನಾಗಿ ನೇಮಿಸುವ ಮೂಲಕ ಶಿಕ್ಷಣ ಸಂಸ್ಥೆಗಳಿಗೆ ನುಸುಳಿದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದ ನಂತರ ಖರ್ಗೆ ಮತ್ತು ಧನಖರ್ ತೀವ್ರ ಮಾತಿನ ಚಕಮಕಿಯಲ್ಲಿ ಸಿಲುಕಿದ ಒಂದು ದಿನದ ನಂತರ ಈ ವಿನಿಮಯವು ನಡೆದಿದೆ.

ಕಟುವಾದ ವಾಗ್ವಾದದ ಹೊರತಾಗಿಯೂ,  ಸಂಸತ್ತಿನ ಜಂಟಿ ಅಧಿವೇಶನಕ್ಕೆ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲೆ ತಿವಾರಿ ತಮ್ಮ ಭಾಷಣವನ್ನು ಮುಂದುವರೆಸಿದರು. ನರೇಂದ್ರ ಮೋದಿ ಸರ್ಕಾರ ತನ್ನ 10 ವರ್ಷಗಳ ಆಡಳಿತದಲ್ಲಿ ಜನರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.

ಚರ್ಚೆಯಲ್ಲಿ ಭಾಗವಹಿಸಿದ ಬಿಜೆಪಿಯ ಅಶೋಕರಾವ್ ಶಂಕರರಾವ್ ಚವ್ಹಾಣ, ಲೋಕಸಭೆ ಚುನಾವಣೆ ವೇಳೆ ಬಿಜೆಪಿ 400 ಸ್ಥಾನಗಳಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಕುರಿತು ಕಾಂಗ್ರೆಸ್ ತಪ್ಪು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ; ತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...