Homeಮುಖಪುಟಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

ಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

- Advertisement -
- Advertisement -

ನಿನ್ನೆ ರಾಜ್ಯಸಭೆ ಅಧಿವೇಶನದ ವೇಳೆ ಹೈಡ್ರಾಮವೇ ನಡೆದಿದೆ. ಚರಣ್‌ ಸಿಂಗ್‌ ಅವರನ್ನು ‘ಭಾರತ ರತ್ನ’ ಗೌರವಕ್ಕೆ ಆಯ್ಕೆ ಮಾಡಿರುವುದರ ಬಗ್ಗೆ ಮಾತನಾಡಲು ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ ಸಿಂಗ್‌ ಅವರಿಗೆ ಸ್ಪೀಕರ್‌ ಅವಕಾಶ ನೀಡಿದ್ದರು, ಇದಕ್ಕೆ ಕಾಂಗ್ರೆಸ್‌ ಸಂಸದರು ಆಕ್ಷೇಪಿಸಿದ್ದಕ್ಕೆ ಕೆರಳಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಾನು ರಾಜೀನಾಮೆ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾರೆ.

ಈ ಬೆಳವಣಿಗೆಯು ತನ್ನ ಚಿಕ್ಕ ಮಗನ ಸಾವಿಗಿಂತ ಹೆಚ್ಚು ನೋವುಂಟುಮಾಡಿದೆ ಎಂದ ಧಂಖರ್, ರಮೇಶ್ ಅವರು ‘ಸ್ಮಶಾನದಲ್ಲಿ ಹಬ್ಬ ಮಾಡುವ ವ್ಯಕ್ತಿ’ ಮತ್ತು ಈ ದುರ್ವರ್ತನೆಯಿಂದಾಗಿ ಅವರು ಮೇಲ್ಮನೆ ಸದಸ್ಯರಾಗಿರಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಜಯಂತ್ ಸಿಂಗ್ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವಾಗ ಸಭಾಪತಿ ಸೂಚಿಸಿಲ್ಲ ಅಥವಾ ಭಾರತ ರತ್ನ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡುವ ಬಗ್ಗೆ ಸದನದ ವ್ಯವಹಾರ ಪತ್ರಗಳಲ್ಲಿ ಪಟ್ಟಿ ಮಾಡಿಲ್ಲ ಎಂಬುದು ಜೈರಾಮ್‌ ರಮೇಶ್‌ ವಾದವಾಗಿತ್ತು. ಜೈರಾಮ್ ರಮೇಶ್ ಅವರು ರಾಷ್ಟ್ರೀಯ ಲೋಕದಳದ ಜಯಂತ್ ಸಿಂಗ್ ಅವರಿಗೆ ನೀವು ಎಲ್ಲಿಗೆ ಹೋಗಲು ಬಯಸಿದ್ದೀರಿ? ಸುಳಿವು ಪ್ರಕಾರ ನೀವು ಲೋಕಸಭೆ ಚುನಾಣೆಯಲ್ಲಿ ಪ್ರತಿಪಕ್ಷಗಳೊಂದಿಗೆ ಸಂಬಂಧವನ್ನು ಕಡಿದುಕೊಳ್ಳಲು ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಲು ಮುಂದಾಗಿದ್ದೀರಿ ಎಂದು ಹೇಳಿದ್ದಾರೆ.

ಇದು ಧಂಖರ್ ಅವರನ್ನು ಕೆರಳಿಸಿದ್ದು, ರಮೇಶ್ ಅವರು ಸದನದಲ್ಲಿ ಇರಲು ಅನರ್ಹರು ಎಂದರು. ನಂತರ ಆರ್ಥಿಕತೆ ಕುರಿತ ಸರ್ಕಾರದ ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಸಭಾಪತಿ ಮತ್ತೆ ಜೈರಾಮ್‌ ರಮೇಶ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಜಯಂತ್‌ಗೆ ಜೈರಾಮ್ ರಮೇಶ್ ಹೇಳಿದ್ದನ್ನು ನಾನು ಕೇಳಿದೆ. ನೀವು (ರಮೇಶ್) ಸ್ಮಶಾನದಲ್ಲಿ ಔತಣ ಮಾಡುವ ವ್ಯಕ್ತಿ. ಈ ದುರ್ನಡತೆಗಾಗಿ ನೀವು (ರಮೇಶ್) ಈ ಸದನದ ಭಾಗವಾಗಲು ಅರ್ಹರಲ್ಲ ಎಂಬುದು ಸತ್ಯ ಎಂದು ಸ್ಪೀಕರ್‌ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಸಂಸದರು ಪ್ರತಿಭಟಿಸುತ್ತಿದ್ದಂತೆ ಧಂಖರ್ ಅವರು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಖರ್ಗೆ, ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುವ ಸರ್ಕಾರದ ನಿರ್ಧಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಾನು ಎಲ್ಲರಿಗೂ ವಂದಿಸುತ್ತೇನೆ. ಆದರೆ ಸದಸ್ಯರು ಸಮಸ್ಯೆಯನ್ನು ಪ್ರಸ್ತಾಪಿಸಲು ಬಯಸಿದರೆ, ನೀವು (ಅಧ್ಯಕ್ಷರು) ‘ಯಾವ ನಿಯಮದ ಅಡಿಯಲ್ಲಿ’ ಎಂದು ಕೇಳುತ್ತೀರಿ. ಯಾವ ನಿಯಮದ ಅಡಿಯಲ್ಲಿ ಅವರಿಗೆ (ಜಯಂತ್ ಸಿಂಗ್) ಮಾತನಾಡಲು ಅವಕಾಶ ನೀಡಿದ್ದೀರಿ ಎಂದು (ನಾನು ತಿಳಿಯ ಬಯಸುತ್ತೇನೆ). ನಮಗೂ ಅನುಮತಿ ಕೊಡಿ. ಒಂದು ಕಡೆ ನೀವು ನಿಯಮಗಳ ಬಗ್ಗೆ ಮಾತನಾಡುತ್ತೀರಿ, ನಿಮಗೆ ವಿವೇಚನೆ ಇದೆ, ಆ ವಿವೇಚನೆಯನ್ನು ವಿವೇಚನೆಯಿಂದ ಬಳಸಬೇಕೇ ಹೊರತು ನಿಮಗೆ ಬೇಕಾದಾಗ ಅಲ್ಲ ಎಂದು ಖರ್ಗೆ ಹೇಳಿದರು. ಸಭಾಪತಿ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಪ್ರತಿಪಾದಿಸಿದ ಅವರು, ಸದನದ ಅಜೆಂಡಾದಲ್ಲಿ ಭಾರತ ರತ್ನದ ಬಗ್ಗೆ ಚರ್ಚೆಯನ್ನು ಸೇರಿಸಿದ್ದರೆ, ಎಲ್ಲರೂ ಅದರಲ್ಲಿ ಭಾಗವಹಿಸುತ್ತಿದ್ದರು ಎಂದು ಹೇಳಿದರು.

ಖರ್ಗೆಯವರು ಎತ್ತಿರುವ ಆಕ್ಷೇಪಗಳಿಗೆ ಧಂಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕರು ಚರಣ್ ಸಿಂಗ್ ಮತ್ತು ಅವರ ಪರಂಪರೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಅಧ್ಯಕ್ಷರಿಗೆ ಸವಾಲು ಹಾಕುತ್ತಿದ್ದಾರೆ ಮತ್ತು ಅದೂ ಇಂತಹ ಸಂದರ್ಭದಲ್ಲಿ, ಇದು ಕಾಂಗ್ರೆಸ್‌ನ ಅಸಲಿ ಮುಖ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆಯವರು ಪೀಠಕ್ಕೆ ಅಗೌರವ ತೋರಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಧಂಖರ್ ಅವರು ಜಯಂತ್ ಸಿಂಗ್ ಅವರಿಂದ ಒಂದೆರಡು ನಿಮಿಷಗಳ ಕಾಲ ಮಾತನಾಡುವ ಬಗ್ಗೆ ಸ್ವೀಕರಿಸಿದ ಮನವಿಯನ್ನು ಓದಿದ್ದಾರೆ.

ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಧಂಖರ್ ಮತ್ತೆ ಮಾತನಾಡಿ, ಇಂದು ನನಗೆ ನೋವಿನ ದಿನವಾಗಿತ್ತು.  ನೋವಿನಿಂದ ನಾನು ನಿಮ್ಮ ಗಮನಕ್ಕೆ ಒಂದು ವಿಷಯವನ್ನು ಹಂಚಿಕೊಳ್ಳಲು ಮತ್ತು ಚರ್ಚಿಸಲು ಬಯಸುತ್ತೇನೆ. ಅವರ ವರ್ತನೆಯು ‘ಅನಿರೀಕ್ಷಿತ’, ‘ನಾಚಿಕೆಗೇಡಿನ’ ಮತ್ತು ‘ನೋವು’ ತಂದಿದೆ ಎಂದು ಹೇಳಿದ್ದಾರೆ. ಇದು ನಮ್ಮ ಘನತೆಗೆ ವಿರುದ್ಧವಾಗಿತ್ತು. ಈ ಅವಧಿಯಲ್ಲಿ ನಮ್ಮ ನಡುವಳಿಕೆ ತೀರಾ ಕೆಳಮಟ್ಟದ್ದಾಗಿದ್ದು, ನನಗೆ ನಾಚಿಕೆಯಾಗುತ್ತಿದೆ. ನನ್ನ ಮನಸ್ಸಿನಲ್ಲಿ ವಿವಿಧ ಆಲೋಚನೆಗಳು ಬಂದವು, ನಾನು ಹುದ್ದೆಯನ್ನು ತೊರೆಯುವ ಬಗ್ಗೆಯೂ ಯೋಚಿಸಿದೆ, ರೈತನ ಮಗನಾಗಿ ಕಷ್ಟದ ದಿನಗಳನ್ನು ಕಂಡಿದ್ದೇನೆ. ನನ್ನ ಬೆಳೆದ ಮಗನನ್ನು ಕಳೆದುಕೊಂಡೆ. ಆದರೆ ಇಂದಿನ ನೋವು ಅದಕ್ಕಿಂತ ಹೆಚ್ಚು ಇತ್ತು. ಜಯಂತ್ ಚೌಧರಿ ಮಾತನಾಡುವಾಗ ಜೈರಾಮ್ ರಮೇಶ್ ಹೇಳಿದ್ದೇನು? ನೀವು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗು ಎಂದು ಹೇಳುವುದನ್ನು ನಾನು ಕೇಳಿದ್ದೇನೆ. ನೀವು ಸ್ಮಶಾನದಲ್ಲಿ ಹಬ್ಬ ಮಾಡಬೇಡಿ, ಇದನ್ನು ನಿರ್ಲಕ್ಷಿಸಲಾಗುವುದಿಲ್ಲ.  ರಾಜಕೀಯ ವಾದಗಳನ್ನು ಬದಿಗಿಟ್ಟು, ನಾಯಕರ ಗೌರವದ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಎಂದು ಹೇಳಿದರು. ನನಗೆ ತುಂಬಾ ದುಃಖವಾಗಿದೆ, ನಾವು ಒಂದೇ ಧ್ವನಿಯಲ್ಲಿ ಅದನ್ನು ಖಂಡಿಸಬೇಕು. ವೈಯಕ್ತಿಕವಾಗಿ ನಾನು ಇದನ್ನು ಖಂಡಿಸುತ್ತೇನೆ ಮತ್ತು ನೀವೆಲ್ಲರೂ ಇದನ್ನು ಖಂಡಿಸಬೇಕೆಂದು ನಾನು ವಿನಂತಿಸುತ್ತೇನೆ. ಸದನದಲ್ಲಿ ನಾವು ಅತ್ಯಂತ ಕೆಳಮಟ್ಟಕ್ಕೆ ತಲುಪಿದ್ದೇವೆ, ಅದನ್ನು ಮತ್ತಷ್ಟು ಕೆಳಗಿಳಿಯಲು ಬಿಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...