Homeಮುಖಪುಟಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

ಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

- Advertisement -
- Advertisement -

ನಿನ್ನೆ ರಾಜ್ಯಸಭೆ ಅಧಿವೇಶನದ ವೇಳೆ ಹೈಡ್ರಾಮವೇ ನಡೆದಿದೆ. ಚರಣ್‌ ಸಿಂಗ್‌ ಅವರನ್ನು ‘ಭಾರತ ರತ್ನ’ ಗೌರವಕ್ಕೆ ಆಯ್ಕೆ ಮಾಡಿರುವುದರ ಬಗ್ಗೆ ಮಾತನಾಡಲು ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ ಸಿಂಗ್‌ ಅವರಿಗೆ ಸ್ಪೀಕರ್‌ ಅವಕಾಶ ನೀಡಿದ್ದರು, ಇದಕ್ಕೆ ಕಾಂಗ್ರೆಸ್‌ ಸಂಸದರು ಆಕ್ಷೇಪಿಸಿದ್ದಕ್ಕೆ ಕೆರಳಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಾನು ರಾಜೀನಾಮೆ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾರೆ.

ಈ ಬೆಳವಣಿಗೆಯು ತನ್ನ ಚಿಕ್ಕ ಮಗನ ಸಾವಿಗಿಂತ ಹೆಚ್ಚು ನೋವುಂಟುಮಾಡಿದೆ ಎಂದ ಧಂಖರ್, ರಮೇಶ್ ಅವರು ‘ಸ್ಮಶಾನದಲ್ಲಿ ಹಬ್ಬ ಮಾಡುವ ವ್ಯಕ್ತಿ’ ಮತ್ತು ಈ ದುರ್ವರ್ತನೆಯಿಂದಾಗಿ ಅವರು ಮೇಲ್ಮನೆ ಸದಸ್ಯರಾಗಿರಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಜಯಂತ್ ಸಿಂಗ್ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವಾಗ ಸಭಾಪತಿ ಸೂಚಿಸಿಲ್ಲ ಅಥವಾ ಭಾರತ ರತ್ನ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡುವ ಬಗ್ಗೆ ಸದನದ ವ್ಯವಹಾರ ಪತ್ರಗಳಲ್ಲಿ ಪಟ್ಟಿ ಮಾಡಿಲ್ಲ ಎಂಬುದು ಜೈರಾಮ್‌ ರಮೇಶ್‌ ವಾದವಾಗಿತ್ತು. ಜೈರಾಮ್ ರಮೇಶ್ ಅವರು ರಾಷ್ಟ್ರೀಯ ಲೋಕದಳದ ಜಯಂತ್ ಸಿಂಗ್ ಅವರಿಗೆ ನೀವು ಎಲ್ಲಿಗೆ ಹೋಗಲು ಬಯಸಿದ್ದೀರಿ? ಸುಳಿವು ಪ್ರಕಾರ ನೀವು ಲೋಕಸಭೆ ಚುನಾಣೆಯಲ್ಲಿ ಪ್ರತಿಪಕ್ಷಗಳೊಂದಿಗೆ ಸಂಬಂಧವನ್ನು ಕಡಿದುಕೊಳ್ಳಲು ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಲು ಮುಂದಾಗಿದ್ದೀರಿ ಎಂದು ಹೇಳಿದ್ದಾರೆ.

ಇದು ಧಂಖರ್ ಅವರನ್ನು ಕೆರಳಿಸಿದ್ದು, ರಮೇಶ್ ಅವರು ಸದನದಲ್ಲಿ ಇರಲು ಅನರ್ಹರು ಎಂದರು. ನಂತರ ಆರ್ಥಿಕತೆ ಕುರಿತ ಸರ್ಕಾರದ ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಸಭಾಪತಿ ಮತ್ತೆ ಜೈರಾಮ್‌ ರಮೇಶ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಜಯಂತ್‌ಗೆ ಜೈರಾಮ್ ರಮೇಶ್ ಹೇಳಿದ್ದನ್ನು ನಾನು ಕೇಳಿದೆ. ನೀವು (ರಮೇಶ್) ಸ್ಮಶಾನದಲ್ಲಿ ಔತಣ ಮಾಡುವ ವ್ಯಕ್ತಿ. ಈ ದುರ್ನಡತೆಗಾಗಿ ನೀವು (ರಮೇಶ್) ಈ ಸದನದ ಭಾಗವಾಗಲು ಅರ್ಹರಲ್ಲ ಎಂಬುದು ಸತ್ಯ ಎಂದು ಸ್ಪೀಕರ್‌ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಸಂಸದರು ಪ್ರತಿಭಟಿಸುತ್ತಿದ್ದಂತೆ ಧಂಖರ್ ಅವರು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಖರ್ಗೆ, ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುವ ಸರ್ಕಾರದ ನಿರ್ಧಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಾನು ಎಲ್ಲರಿಗೂ ವಂದಿಸುತ್ತೇನೆ. ಆದರೆ ಸದಸ್ಯರು ಸಮಸ್ಯೆಯನ್ನು ಪ್ರಸ್ತಾಪಿಸಲು ಬಯಸಿದರೆ, ನೀವು (ಅಧ್ಯಕ್ಷರು) ‘ಯಾವ ನಿಯಮದ ಅಡಿಯಲ್ಲಿ’ ಎಂದು ಕೇಳುತ್ತೀರಿ. ಯಾವ ನಿಯಮದ ಅಡಿಯಲ್ಲಿ ಅವರಿಗೆ (ಜಯಂತ್ ಸಿಂಗ್) ಮಾತನಾಡಲು ಅವಕಾಶ ನೀಡಿದ್ದೀರಿ ಎಂದು (ನಾನು ತಿಳಿಯ ಬಯಸುತ್ತೇನೆ). ನಮಗೂ ಅನುಮತಿ ಕೊಡಿ. ಒಂದು ಕಡೆ ನೀವು ನಿಯಮಗಳ ಬಗ್ಗೆ ಮಾತನಾಡುತ್ತೀರಿ, ನಿಮಗೆ ವಿವೇಚನೆ ಇದೆ, ಆ ವಿವೇಚನೆಯನ್ನು ವಿವೇಚನೆಯಿಂದ ಬಳಸಬೇಕೇ ಹೊರತು ನಿಮಗೆ ಬೇಕಾದಾಗ ಅಲ್ಲ ಎಂದು ಖರ್ಗೆ ಹೇಳಿದರು. ಸಭಾಪತಿ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಪ್ರತಿಪಾದಿಸಿದ ಅವರು, ಸದನದ ಅಜೆಂಡಾದಲ್ಲಿ ಭಾರತ ರತ್ನದ ಬಗ್ಗೆ ಚರ್ಚೆಯನ್ನು ಸೇರಿಸಿದ್ದರೆ, ಎಲ್ಲರೂ ಅದರಲ್ಲಿ ಭಾಗವಹಿಸುತ್ತಿದ್ದರು ಎಂದು ಹೇಳಿದರು.

ಖರ್ಗೆಯವರು ಎತ್ತಿರುವ ಆಕ್ಷೇಪಗಳಿಗೆ ಧಂಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕರು ಚರಣ್ ಸಿಂಗ್ ಮತ್ತು ಅವರ ಪರಂಪರೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಅಧ್ಯಕ್ಷರಿಗೆ ಸವಾಲು ಹಾಕುತ್ತಿದ್ದಾರೆ ಮತ್ತು ಅದೂ ಇಂತಹ ಸಂದರ್ಭದಲ್ಲಿ, ಇದು ಕಾಂಗ್ರೆಸ್‌ನ ಅಸಲಿ ಮುಖ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆಯವರು ಪೀಠಕ್ಕೆ ಅಗೌರವ ತೋರಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಧಂಖರ್ ಅವರು ಜಯಂತ್ ಸಿಂಗ್ ಅವರಿಂದ ಒಂದೆರಡು ನಿಮಿಷಗಳ ಕಾಲ ಮಾತನಾಡುವ ಬಗ್ಗೆ ಸ್ವೀಕರಿಸಿದ ಮನವಿಯನ್ನು ಓದಿದ್ದಾರೆ.

ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಧಂಖರ್ ಮತ್ತೆ ಮಾತನಾಡಿ, ಇಂದು ನನಗೆ ನೋವಿನ ದಿನವಾಗಿತ್ತು.  ನೋವಿನಿಂದ ನಾನು ನಿಮ್ಮ ಗಮನಕ್ಕೆ ಒಂದು ವಿಷಯವನ್ನು ಹಂಚಿಕೊಳ್ಳಲು ಮತ್ತು ಚರ್ಚಿಸಲು ಬಯಸುತ್ತೇನೆ. ಅವರ ವರ್ತನೆಯು ‘ಅನಿರೀಕ್ಷಿತ’, ‘ನಾಚಿಕೆಗೇಡಿನ’ ಮತ್ತು ‘ನೋವು’ ತಂದಿದೆ ಎಂದು ಹೇಳಿದ್ದಾರೆ. ಇದು ನಮ್ಮ ಘನತೆಗೆ ವಿರುದ್ಧವಾಗಿತ್ತು. ಈ ಅವಧಿಯಲ್ಲಿ ನಮ್ಮ ನಡುವಳಿಕೆ ತೀರಾ ಕೆಳಮಟ್ಟದ್ದಾಗಿದ್ದು, ನನಗೆ ನಾಚಿಕೆಯಾಗುತ್ತಿದೆ. ನನ್ನ ಮನಸ್ಸಿನಲ್ಲಿ ವಿವಿಧ ಆಲೋಚನೆಗಳು ಬಂದವು, ನಾನು ಹುದ್ದೆಯನ್ನು ತೊರೆಯುವ ಬಗ್ಗೆಯೂ ಯೋಚಿಸಿದೆ, ರೈತನ ಮಗನಾಗಿ ಕಷ್ಟದ ದಿನಗಳನ್ನು ಕಂಡಿದ್ದೇನೆ. ನನ್ನ ಬೆಳೆದ ಮಗನನ್ನು ಕಳೆದುಕೊಂಡೆ. ಆದರೆ ಇಂದಿನ ನೋವು ಅದಕ್ಕಿಂತ ಹೆಚ್ಚು ಇತ್ತು. ಜಯಂತ್ ಚೌಧರಿ ಮಾತನಾಡುವಾಗ ಜೈರಾಮ್ ರಮೇಶ್ ಹೇಳಿದ್ದೇನು? ನೀವು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗು ಎಂದು ಹೇಳುವುದನ್ನು ನಾನು ಕೇಳಿದ್ದೇನೆ. ನೀವು ಸ್ಮಶಾನದಲ್ಲಿ ಹಬ್ಬ ಮಾಡಬೇಡಿ, ಇದನ್ನು ನಿರ್ಲಕ್ಷಿಸಲಾಗುವುದಿಲ್ಲ.  ರಾಜಕೀಯ ವಾದಗಳನ್ನು ಬದಿಗಿಟ್ಟು, ನಾಯಕರ ಗೌರವದ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಎಂದು ಹೇಳಿದರು. ನನಗೆ ತುಂಬಾ ದುಃಖವಾಗಿದೆ, ನಾವು ಒಂದೇ ಧ್ವನಿಯಲ್ಲಿ ಅದನ್ನು ಖಂಡಿಸಬೇಕು. ವೈಯಕ್ತಿಕವಾಗಿ ನಾನು ಇದನ್ನು ಖಂಡಿಸುತ್ತೇನೆ ಮತ್ತು ನೀವೆಲ್ಲರೂ ಇದನ್ನು ಖಂಡಿಸಬೇಕೆಂದು ನಾನು ವಿನಂತಿಸುತ್ತೇನೆ. ಸದನದಲ್ಲಿ ನಾವು ಅತ್ಯಂತ ಕೆಳಮಟ್ಟಕ್ಕೆ ತಲುಪಿದ್ದೇವೆ, ಅದನ್ನು ಮತ್ತಷ್ಟು ಕೆಳಗಿಳಿಯಲು ಬಿಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...