Homeಮುಖಪುಟಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

ಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

- Advertisement -
- Advertisement -

ನಿನ್ನೆ ರಾಜ್ಯಸಭೆ ಅಧಿವೇಶನದ ವೇಳೆ ಹೈಡ್ರಾಮವೇ ನಡೆದಿದೆ. ಚರಣ್‌ ಸಿಂಗ್‌ ಅವರನ್ನು ‘ಭಾರತ ರತ್ನ’ ಗೌರವಕ್ಕೆ ಆಯ್ಕೆ ಮಾಡಿರುವುದರ ಬಗ್ಗೆ ಮಾತನಾಡಲು ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ ಸಿಂಗ್‌ ಅವರಿಗೆ ಸ್ಪೀಕರ್‌ ಅವಕಾಶ ನೀಡಿದ್ದರು, ಇದಕ್ಕೆ ಕಾಂಗ್ರೆಸ್‌ ಸಂಸದರು ಆಕ್ಷೇಪಿಸಿದ್ದಕ್ಕೆ ಕೆರಳಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಾನು ರಾಜೀನಾಮೆ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾರೆ.

ಈ ಬೆಳವಣಿಗೆಯು ತನ್ನ ಚಿಕ್ಕ ಮಗನ ಸಾವಿಗಿಂತ ಹೆಚ್ಚು ನೋವುಂಟುಮಾಡಿದೆ ಎಂದ ಧಂಖರ್, ರಮೇಶ್ ಅವರು ‘ಸ್ಮಶಾನದಲ್ಲಿ ಹಬ್ಬ ಮಾಡುವ ವ್ಯಕ್ತಿ’ ಮತ್ತು ಈ ದುರ್ವರ್ತನೆಯಿಂದಾಗಿ ಅವರು ಮೇಲ್ಮನೆ ಸದಸ್ಯರಾಗಿರಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಜಯಂತ್ ಸಿಂಗ್ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವಾಗ ಸಭಾಪತಿ ಸೂಚಿಸಿಲ್ಲ ಅಥವಾ ಭಾರತ ರತ್ನ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡುವ ಬಗ್ಗೆ ಸದನದ ವ್ಯವಹಾರ ಪತ್ರಗಳಲ್ಲಿ ಪಟ್ಟಿ ಮಾಡಿಲ್ಲ ಎಂಬುದು ಜೈರಾಮ್‌ ರಮೇಶ್‌ ವಾದವಾಗಿತ್ತು. ಜೈರಾಮ್ ರಮೇಶ್ ಅವರು ರಾಷ್ಟ್ರೀಯ ಲೋಕದಳದ ಜಯಂತ್ ಸಿಂಗ್ ಅವರಿಗೆ ನೀವು ಎಲ್ಲಿಗೆ ಹೋಗಲು ಬಯಸಿದ್ದೀರಿ? ಸುಳಿವು ಪ್ರಕಾರ ನೀವು ಲೋಕಸಭೆ ಚುನಾಣೆಯಲ್ಲಿ ಪ್ರತಿಪಕ್ಷಗಳೊಂದಿಗೆ ಸಂಬಂಧವನ್ನು ಕಡಿದುಕೊಳ್ಳಲು ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಲು ಮುಂದಾಗಿದ್ದೀರಿ ಎಂದು ಹೇಳಿದ್ದಾರೆ.

ಇದು ಧಂಖರ್ ಅವರನ್ನು ಕೆರಳಿಸಿದ್ದು, ರಮೇಶ್ ಅವರು ಸದನದಲ್ಲಿ ಇರಲು ಅನರ್ಹರು ಎಂದರು. ನಂತರ ಆರ್ಥಿಕತೆ ಕುರಿತ ಸರ್ಕಾರದ ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಸಭಾಪತಿ ಮತ್ತೆ ಜೈರಾಮ್‌ ರಮೇಶ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಜಯಂತ್‌ಗೆ ಜೈರಾಮ್ ರಮೇಶ್ ಹೇಳಿದ್ದನ್ನು ನಾನು ಕೇಳಿದೆ. ನೀವು (ರಮೇಶ್) ಸ್ಮಶಾನದಲ್ಲಿ ಔತಣ ಮಾಡುವ ವ್ಯಕ್ತಿ. ಈ ದುರ್ನಡತೆಗಾಗಿ ನೀವು (ರಮೇಶ್) ಈ ಸದನದ ಭಾಗವಾಗಲು ಅರ್ಹರಲ್ಲ ಎಂಬುದು ಸತ್ಯ ಎಂದು ಸ್ಪೀಕರ್‌ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಸಂಸದರು ಪ್ರತಿಭಟಿಸುತ್ತಿದ್ದಂತೆ ಧಂಖರ್ ಅವರು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಖರ್ಗೆ, ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುವ ಸರ್ಕಾರದ ನಿರ್ಧಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಾನು ಎಲ್ಲರಿಗೂ ವಂದಿಸುತ್ತೇನೆ. ಆದರೆ ಸದಸ್ಯರು ಸಮಸ್ಯೆಯನ್ನು ಪ್ರಸ್ತಾಪಿಸಲು ಬಯಸಿದರೆ, ನೀವು (ಅಧ್ಯಕ್ಷರು) ‘ಯಾವ ನಿಯಮದ ಅಡಿಯಲ್ಲಿ’ ಎಂದು ಕೇಳುತ್ತೀರಿ. ಯಾವ ನಿಯಮದ ಅಡಿಯಲ್ಲಿ ಅವರಿಗೆ (ಜಯಂತ್ ಸಿಂಗ್) ಮಾತನಾಡಲು ಅವಕಾಶ ನೀಡಿದ್ದೀರಿ ಎಂದು (ನಾನು ತಿಳಿಯ ಬಯಸುತ್ತೇನೆ). ನಮಗೂ ಅನುಮತಿ ಕೊಡಿ. ಒಂದು ಕಡೆ ನೀವು ನಿಯಮಗಳ ಬಗ್ಗೆ ಮಾತನಾಡುತ್ತೀರಿ, ನಿಮಗೆ ವಿವೇಚನೆ ಇದೆ, ಆ ವಿವೇಚನೆಯನ್ನು ವಿವೇಚನೆಯಿಂದ ಬಳಸಬೇಕೇ ಹೊರತು ನಿಮಗೆ ಬೇಕಾದಾಗ ಅಲ್ಲ ಎಂದು ಖರ್ಗೆ ಹೇಳಿದರು. ಸಭಾಪತಿ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಪ್ರತಿಪಾದಿಸಿದ ಅವರು, ಸದನದ ಅಜೆಂಡಾದಲ್ಲಿ ಭಾರತ ರತ್ನದ ಬಗ್ಗೆ ಚರ್ಚೆಯನ್ನು ಸೇರಿಸಿದ್ದರೆ, ಎಲ್ಲರೂ ಅದರಲ್ಲಿ ಭಾಗವಹಿಸುತ್ತಿದ್ದರು ಎಂದು ಹೇಳಿದರು.

ಖರ್ಗೆಯವರು ಎತ್ತಿರುವ ಆಕ್ಷೇಪಗಳಿಗೆ ಧಂಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕರು ಚರಣ್ ಸಿಂಗ್ ಮತ್ತು ಅವರ ಪರಂಪರೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಅಧ್ಯಕ್ಷರಿಗೆ ಸವಾಲು ಹಾಕುತ್ತಿದ್ದಾರೆ ಮತ್ತು ಅದೂ ಇಂತಹ ಸಂದರ್ಭದಲ್ಲಿ, ಇದು ಕಾಂಗ್ರೆಸ್‌ನ ಅಸಲಿ ಮುಖ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆಯವರು ಪೀಠಕ್ಕೆ ಅಗೌರವ ತೋರಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಧಂಖರ್ ಅವರು ಜಯಂತ್ ಸಿಂಗ್ ಅವರಿಂದ ಒಂದೆರಡು ನಿಮಿಷಗಳ ಕಾಲ ಮಾತನಾಡುವ ಬಗ್ಗೆ ಸ್ವೀಕರಿಸಿದ ಮನವಿಯನ್ನು ಓದಿದ್ದಾರೆ.

ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಧಂಖರ್ ಮತ್ತೆ ಮಾತನಾಡಿ, ಇಂದು ನನಗೆ ನೋವಿನ ದಿನವಾಗಿತ್ತು.  ನೋವಿನಿಂದ ನಾನು ನಿಮ್ಮ ಗಮನಕ್ಕೆ ಒಂದು ವಿಷಯವನ್ನು ಹಂಚಿಕೊಳ್ಳಲು ಮತ್ತು ಚರ್ಚಿಸಲು ಬಯಸುತ್ತೇನೆ. ಅವರ ವರ್ತನೆಯು ‘ಅನಿರೀಕ್ಷಿತ’, ‘ನಾಚಿಕೆಗೇಡಿನ’ ಮತ್ತು ‘ನೋವು’ ತಂದಿದೆ ಎಂದು ಹೇಳಿದ್ದಾರೆ. ಇದು ನಮ್ಮ ಘನತೆಗೆ ವಿರುದ್ಧವಾಗಿತ್ತು. ಈ ಅವಧಿಯಲ್ಲಿ ನಮ್ಮ ನಡುವಳಿಕೆ ತೀರಾ ಕೆಳಮಟ್ಟದ್ದಾಗಿದ್ದು, ನನಗೆ ನಾಚಿಕೆಯಾಗುತ್ತಿದೆ. ನನ್ನ ಮನಸ್ಸಿನಲ್ಲಿ ವಿವಿಧ ಆಲೋಚನೆಗಳು ಬಂದವು, ನಾನು ಹುದ್ದೆಯನ್ನು ತೊರೆಯುವ ಬಗ್ಗೆಯೂ ಯೋಚಿಸಿದೆ, ರೈತನ ಮಗನಾಗಿ ಕಷ್ಟದ ದಿನಗಳನ್ನು ಕಂಡಿದ್ದೇನೆ. ನನ್ನ ಬೆಳೆದ ಮಗನನ್ನು ಕಳೆದುಕೊಂಡೆ. ಆದರೆ ಇಂದಿನ ನೋವು ಅದಕ್ಕಿಂತ ಹೆಚ್ಚು ಇತ್ತು. ಜಯಂತ್ ಚೌಧರಿ ಮಾತನಾಡುವಾಗ ಜೈರಾಮ್ ರಮೇಶ್ ಹೇಳಿದ್ದೇನು? ನೀವು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗು ಎಂದು ಹೇಳುವುದನ್ನು ನಾನು ಕೇಳಿದ್ದೇನೆ. ನೀವು ಸ್ಮಶಾನದಲ್ಲಿ ಹಬ್ಬ ಮಾಡಬೇಡಿ, ಇದನ್ನು ನಿರ್ಲಕ್ಷಿಸಲಾಗುವುದಿಲ್ಲ.  ರಾಜಕೀಯ ವಾದಗಳನ್ನು ಬದಿಗಿಟ್ಟು, ನಾಯಕರ ಗೌರವದ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಎಂದು ಹೇಳಿದರು. ನನಗೆ ತುಂಬಾ ದುಃಖವಾಗಿದೆ, ನಾವು ಒಂದೇ ಧ್ವನಿಯಲ್ಲಿ ಅದನ್ನು ಖಂಡಿಸಬೇಕು. ವೈಯಕ್ತಿಕವಾಗಿ ನಾನು ಇದನ್ನು ಖಂಡಿಸುತ್ತೇನೆ ಮತ್ತು ನೀವೆಲ್ಲರೂ ಇದನ್ನು ಖಂಡಿಸಬೇಕೆಂದು ನಾನು ವಿನಂತಿಸುತ್ತೇನೆ. ಸದನದಲ್ಲಿ ನಾವು ಅತ್ಯಂತ ಕೆಳಮಟ್ಟಕ್ಕೆ ತಲುಪಿದ್ದೇವೆ, ಅದನ್ನು ಮತ್ತಷ್ಟು ಕೆಳಗಿಳಿಯಲು ಬಿಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...