Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...