Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...