Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...