Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...