Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...