Homeಮುಖಪುಟಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

ಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

- Advertisement -
- Advertisement -

2021ರ ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಧರಮ್ ಸಂಸದ್ ಕಾರ್ಯಕ್ರಮದಲ್ಲಿ ಮಾಡಲಾದ ಪ್ರಚೋದನಕಾರಿ ಭಾಷಣಗಳ ಸಂಬಂಧ ತನಿಖೆಯನ್ನು ಮುಂದುವರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನಿಖಾಧಿಕಾರಿಗೆ ಸೂಚಿಸಿದೆ.

“ಡಿಸೆಂಬರ್ 19, 2021ರಂದು ಘಟನೆ ನಡೆದಾಗಿನಿಂದ ತನಿಖೆಯನ್ನು ಮುಂದುವರಿಸಲು ತೆಗೆದುಕೊಂಡ ಕ್ರಮಗಳನ್ನು ತನಿಖಾಧಿಕಾರಿ (ಐಒ) ತನ್ನ ದಾಖಲೆಯಲ್ಲಿ ಇಡುವುದು ಅವಶ್ಯಕ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಸಿಜೆಐ  ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಹೇಳಿದೆ. ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ, ಘಟನೆಯ ಬಗ್ಗೆ ನಿಷ್ಕ್ರಿಯತೆ ತೋರಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶದನ್ ಫರಾಸತ್, “ಘಟನೆ ನಡೆದ ಐದು ತಿಂಗಳ ನಂತರ 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದು ಒಂದು ನಿರ್ದಿಷ್ಟ ರೀತಿಯ ಹಿಂಸಾಚಾರಕ್ಕೆ ನೀಡಿದ ಕರೆಯಾಗಿದೆ. ಪ್ರಕರಣ ಸಾಕಷ್ಟು ಗಂಭೀರವಾಗಿದೆ. ಇದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಚಾರವಲ್ಲ, ಆತನೊಂದಿಗೆ ಅನೇಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಅಂತಹ ಹೇಳಿಕೆಗಳನ್ನು ನೀಡುವ ಜನರನ್ನು ಗುರುತಿಸುವುದು ಮತ್ತು ಅಂಥವರು ಸಾರ್ವಜನಿಕ ವೇದಿಕೆಗಳನ್ನು ಬಳಸದಿರುವಂತೆ ಖಚಿತಪಡಿಸಿಕೊಳ್ಳುವುದು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಾಗಿರುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

“ಶೀಘ್ರ ಎಫ್‌ಐಆರ್‌ ದಾಖಲಿಸಿ ಚಾರ್ಜ್‌ಶೀಟ್‌ ಸಲ್ಲಿಸುವ ಅಗತ್ಯವಿದ್ದರೂ ಐದು ತಿಂಗಳಾದರೂ ಎಫ್‌ಐಆರ್‌ ದಾಖಲಿಸಲಿಲ್ಲ. ಇನ್ನೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಅವರು ಯಾರನ್ನಾದರೂ ವಿಚಾರಣೆಗೆ ಕರೆದಿದ್ದಾರೆಯೇ- ಅದನ್ನೂ ಹೇಳುವುದಿಲ್ಲ. ಅವರು ಯಾರನ್ನೂ ಬಂಧಿಸಿಲ್ಲ. ಯಾವುದೇ ಆರೋಪಪಟ್ಟಿ ಸಲ್ಲಿಕೆಯಾಗಿಲ್ಲ” ಎಂದು ವಾದಿಸಿರುವ ಅರ್ಜಿದಾರರ ಪರ ವಕೀಲರು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್, “ಸುಪ್ರೀಂ ಕೋರ್ಟ್ ನೀಡಿದ ಯಾವುದೇ ನಿರ್ದೇಶನವನ್ನು ಉಲ್ಲಂಘಿಸಿಲ್ಲ. ತನಿಖೆ ಹೇಗೆ ಮುಂದುವರಿಯಬೇಕು ಎಂಬುದನ್ನು ಅರ್ಜಿದಾರರು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಗ ಸಿಜೆಐ, “ಆದರೆ ತನಿಖೆಯ ವಿಷಯದಲ್ಲಿ ನೀವು ಏನು ಮಾಡುತ್ತಿದ್ದೀರಿ? ಘಟನೆ ಡಿಸೆಂಬರ್ 2021ರಲ್ಲಿ ನಡೆದಿದೆ. ಸುಮಾರು ಐದು ತಿಂಗಳ ನಂತರ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಿಸಲು ಐದು ತಿಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆ.

“ವಿಳಂಬ ಉದ್ದೇಶಪೂರ್ವಕವಲ್ಲ” ಎಂದು ಎಎಸ್‌ಜಿ ಉತ್ತರಿಸಿದ್ದಾರೆ. ಪೊಲೀಸರಿಗೆ ಬಂದ ಮಾಹಿತಿಯ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

“ಮೇ 4 ರ ನಂತರ, ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ? ಯಾವ ತನಿಖೆ ಮಾಡಿದ್ದೀರಿ? ಎಷ್ಟು ಜನರನ್ನು ಪರೀಕ್ಷಿಸಲಾಗಿದೆ?” ಎಂದು ಸಿಜೆಐ ಕೇಳಿದರು.

“ಐದು ತಿಂಗಳ ನಂತರ ಎಫ್‌ಐಆರ್ ದಾಖಲಿಸಿರುವಾಗ ಕೋರ್ಟ್‌ನ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ ಎಂದು ಹೇಗೆ ಹೇಳಬಹುದು?” ಎಂದು ಸಿಜೆಐ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. “ನೀವು ಐದು ತಿಂಗಳ ನಂತರ ಮತ್ತು ಎಂಟು ತಿಂಗಳ ನಂತರ ಎಫ್‌ಐಆರ್ ಅನ್ನು ನೋಂದಾಯಿಸಿದ್ದು, ಯಾವುದೇ ಗಣನೀಯ ಪ್ರಗತಿಯಿಲ್ಲ. ಮಾರ್ಗಸೂಚಿಗಳನ್ನು ನೀವು ಹೇಗೆ ಅನುಸರಿಸಿದ್ದೀರಿ?”  ಎಂದು ಸಿಜೆಐ ಛಡಿಯೇಟು ನೀಡಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ತನಿಖೆ ಯಾವ ಹಂತದಲ್ಲಿದೆ ಎಂದು ತಿಳಿಸಲು ಸೂಚಿಸಿದ್ದಾರೆ.

ಇದು ಕೇವಲ ಅರ್ಜಿದಾರರ ಆರೋಪಗಳಾಗಿದ್ದು, ತನಿಖೆಯ ಪ್ರಗತಿಯ ಬಗ್ಗೆ ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸುವುದಾಗಿ ನಟರಾಜ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...