Homeಮುಖಪುಟಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

ಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

- Advertisement -
- Advertisement -

2021ರ ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಧರಮ್ ಸಂಸದ್ ಕಾರ್ಯಕ್ರಮದಲ್ಲಿ ಮಾಡಲಾದ ಪ್ರಚೋದನಕಾರಿ ಭಾಷಣಗಳ ಸಂಬಂಧ ತನಿಖೆಯನ್ನು ಮುಂದುವರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನಿಖಾಧಿಕಾರಿಗೆ ಸೂಚಿಸಿದೆ.

“ಡಿಸೆಂಬರ್ 19, 2021ರಂದು ಘಟನೆ ನಡೆದಾಗಿನಿಂದ ತನಿಖೆಯನ್ನು ಮುಂದುವರಿಸಲು ತೆಗೆದುಕೊಂಡ ಕ್ರಮಗಳನ್ನು ತನಿಖಾಧಿಕಾರಿ (ಐಒ) ತನ್ನ ದಾಖಲೆಯಲ್ಲಿ ಇಡುವುದು ಅವಶ್ಯಕ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಸಿಜೆಐ  ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಹೇಳಿದೆ. ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ, ಘಟನೆಯ ಬಗ್ಗೆ ನಿಷ್ಕ್ರಿಯತೆ ತೋರಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶದನ್ ಫರಾಸತ್, “ಘಟನೆ ನಡೆದ ಐದು ತಿಂಗಳ ನಂತರ 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದು ಒಂದು ನಿರ್ದಿಷ್ಟ ರೀತಿಯ ಹಿಂಸಾಚಾರಕ್ಕೆ ನೀಡಿದ ಕರೆಯಾಗಿದೆ. ಪ್ರಕರಣ ಸಾಕಷ್ಟು ಗಂಭೀರವಾಗಿದೆ. ಇದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಚಾರವಲ್ಲ, ಆತನೊಂದಿಗೆ ಅನೇಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಅಂತಹ ಹೇಳಿಕೆಗಳನ್ನು ನೀಡುವ ಜನರನ್ನು ಗುರುತಿಸುವುದು ಮತ್ತು ಅಂಥವರು ಸಾರ್ವಜನಿಕ ವೇದಿಕೆಗಳನ್ನು ಬಳಸದಿರುವಂತೆ ಖಚಿತಪಡಿಸಿಕೊಳ್ಳುವುದು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಾಗಿರುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

“ಶೀಘ್ರ ಎಫ್‌ಐಆರ್‌ ದಾಖಲಿಸಿ ಚಾರ್ಜ್‌ಶೀಟ್‌ ಸಲ್ಲಿಸುವ ಅಗತ್ಯವಿದ್ದರೂ ಐದು ತಿಂಗಳಾದರೂ ಎಫ್‌ಐಆರ್‌ ದಾಖಲಿಸಲಿಲ್ಲ. ಇನ್ನೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಅವರು ಯಾರನ್ನಾದರೂ ವಿಚಾರಣೆಗೆ ಕರೆದಿದ್ದಾರೆಯೇ- ಅದನ್ನೂ ಹೇಳುವುದಿಲ್ಲ. ಅವರು ಯಾರನ್ನೂ ಬಂಧಿಸಿಲ್ಲ. ಯಾವುದೇ ಆರೋಪಪಟ್ಟಿ ಸಲ್ಲಿಕೆಯಾಗಿಲ್ಲ” ಎಂದು ವಾದಿಸಿರುವ ಅರ್ಜಿದಾರರ ಪರ ವಕೀಲರು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್, “ಸುಪ್ರೀಂ ಕೋರ್ಟ್ ನೀಡಿದ ಯಾವುದೇ ನಿರ್ದೇಶನವನ್ನು ಉಲ್ಲಂಘಿಸಿಲ್ಲ. ತನಿಖೆ ಹೇಗೆ ಮುಂದುವರಿಯಬೇಕು ಎಂಬುದನ್ನು ಅರ್ಜಿದಾರರು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಗ ಸಿಜೆಐ, “ಆದರೆ ತನಿಖೆಯ ವಿಷಯದಲ್ಲಿ ನೀವು ಏನು ಮಾಡುತ್ತಿದ್ದೀರಿ? ಘಟನೆ ಡಿಸೆಂಬರ್ 2021ರಲ್ಲಿ ನಡೆದಿದೆ. ಸುಮಾರು ಐದು ತಿಂಗಳ ನಂತರ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಿಸಲು ಐದು ತಿಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆ.

“ವಿಳಂಬ ಉದ್ದೇಶಪೂರ್ವಕವಲ್ಲ” ಎಂದು ಎಎಸ್‌ಜಿ ಉತ್ತರಿಸಿದ್ದಾರೆ. ಪೊಲೀಸರಿಗೆ ಬಂದ ಮಾಹಿತಿಯ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

“ಮೇ 4 ರ ನಂತರ, ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ? ಯಾವ ತನಿಖೆ ಮಾಡಿದ್ದೀರಿ? ಎಷ್ಟು ಜನರನ್ನು ಪರೀಕ್ಷಿಸಲಾಗಿದೆ?” ಎಂದು ಸಿಜೆಐ ಕೇಳಿದರು.

“ಐದು ತಿಂಗಳ ನಂತರ ಎಫ್‌ಐಆರ್ ದಾಖಲಿಸಿರುವಾಗ ಕೋರ್ಟ್‌ನ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ ಎಂದು ಹೇಗೆ ಹೇಳಬಹುದು?” ಎಂದು ಸಿಜೆಐ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. “ನೀವು ಐದು ತಿಂಗಳ ನಂತರ ಮತ್ತು ಎಂಟು ತಿಂಗಳ ನಂತರ ಎಫ್‌ಐಆರ್ ಅನ್ನು ನೋಂದಾಯಿಸಿದ್ದು, ಯಾವುದೇ ಗಣನೀಯ ಪ್ರಗತಿಯಿಲ್ಲ. ಮಾರ್ಗಸೂಚಿಗಳನ್ನು ನೀವು ಹೇಗೆ ಅನುಸರಿಸಿದ್ದೀರಿ?”  ಎಂದು ಸಿಜೆಐ ಛಡಿಯೇಟು ನೀಡಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ತನಿಖೆ ಯಾವ ಹಂತದಲ್ಲಿದೆ ಎಂದು ತಿಳಿಸಲು ಸೂಚಿಸಿದ್ದಾರೆ.

ಇದು ಕೇವಲ ಅರ್ಜಿದಾರರ ಆರೋಪಗಳಾಗಿದ್ದು, ತನಿಖೆಯ ಪ್ರಗತಿಯ ಬಗ್ಗೆ ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸುವುದಾಗಿ ನಟರಾಜ್ ಪ್ರತಿಕ್ರಿಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...