Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...