Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...