Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...