Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...