Homeಅಂತರಾಷ್ಟ್ರೀಯಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಕೊರೊನಾ ವಿರುದ್ದ ’ಧಾರಾವಿ ಸ್ಲಂ’ ನಡೆಸಿದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಶ್ಲಾಘನೆ

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ಧಾರಾವಿಯಲ್ಲಿ ಜೂನ್ 9 ರಂದು ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದ್ದು, ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳಿವೆ.

- Advertisement -
- Advertisement -

ವಿಶ್ವದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದಾದ ’ಧಾರಾವಿ ಸ್ಲಂ’ ನಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ತೆಗೆದುಕೊಂಡ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಸಾಂಕ್ರಾಮಿಕದ ವಿರುದ್ದ ರಾಷ್ಟ್ರೀಯ ಏಕತೆ ಮತ್ತು ಜಾಗತಿಕ ಒಗ್ಗಟ್ಟಿನೊಂದಿಗೆ ಸಮುದಾಯದ ತೊಡಗಿಸಿಕೊಳ್ಳುವಿಕೆಯ ಅಗತ್ಯವನ್ನು ಅದು ಒತ್ತಿಹೇಳಿದೆ.

ಭಾರತದ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿರುವ ಧಾರವಿ ಕೊಳೆಗೇರಿ 2.5 ಚದರ ಕಿಲೋಮೀಟರ್ ವಿಸ್ತೀರ್ಣದಷ್ಟು ದೊಡ್ಡದಿದೆ ಹಾಗೂ ಅಲ್ಲಿ 6.5 ಲಕ್ಷ ಜನರು ವಾಸಿಸುತ್ತಿದ್ದಾರೆ. ಕಿರಿದಾದ ಲೇನ್‌ಗಳು ಮತ್ತು ತೆರೆದ ಚರಂಡಿಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಜನರು ಗುಡಿಸಲುಗಳು ಮತ್ತು ಶಿಥಿಲಗೊಂಡ ಕಟ್ಟಡಗಳಲ್ಲಿ ವಾಸಿಸುತ್ತಿದ್ದಾರೆ.

ಮಾರ್ಚ್ 11 ರಲ್ಲಿ ಮುಂಬೈಯ ಮೊದಲ ಕೊರೊನಾ ಪ್ರಕರಣ ವರದಿಯಾದ ಸುಮಾರು ಮೂರು ವಾರಗಳ ನಂತರ, ’ಧಾರಾವಿ ಕೊಳೆಗೇರಿ’ ಯಲ್ಲಿ ಮೊದಲ ಕೊರೊನಾ ಪತ್ತೆಯಾಗಿದ್ದರು.

ಶುಕ್ರವಾರ ಜಿನೇವಾದಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ’’ಸಾಂಕ್ರಮಿಕ ಹರಡುವುದು ತೀವ್ರವಾಗಿದ್ದರೂ ಸಹ ಅದನ್ನು ಮತ್ತೆ ನಿಯಂತ್ರಣಕ್ಕೆ ತರಬಹುದು ಎಂದು ಪ್ರಪಂಚದಾದ್ಯಂತದ ಅನೇಕ ಉದಾಹರಣೆಗಳಿವೆ.

ಇಟಲಿ, ಸ್ಪೇನ್ ಮತ್ತು ದಕ್ಷಿಣ ಕೊರಿಯಾ ಅಲ್ಲದೆ ಮುಂಬೈ ಮಹಾನಗರದ ಜನದಟ್ಟನೆಯ ಪ್ರದೇಶವಾದ ಧಾರವಿ ಸಹ ಇದಕ್ಕೆ ಉದಾಹರಣೆಯಾಗಿದೆ” ಎಂದು ಘೆಬ್ರೆಯೆಸಸ್ ಹೇಳಿದ್ದಾರೆ.

ಒಮ್ಮೆ ನಗರದ ಕೊರೊನಾ ಹಾಟ್‌ಸ್ಪಾಟ್ ಆಗಿದ್ದ ದಾರಾವಿಯಲ್ಲಿ ಜೂನ್ 9 ರಂದು ಕೇವಲ ಒಂಬತ್ತು ಹೊಸ ಸೋಂಕುಗಳು ಪತ್ತೆಯಾಗಿದೆ. ಇದುವರೆಗೆ ಅಲ್ಲಿ ಒಟ್ಟು ಪ್ರಕರಣ 2,347 ವರದಿಯಾಗಿದೆ. ಮುಂಬೈಯಲ್ಲಿ 88,000 ಕೊರೊನಾ ಪ್ರಕರಣಗಳು ಮತ್ತು 5,129 ಸಾವುಗಳು ದಾಖಲಾಗಿವೆ.

ಪ್ರಸ್ತುತ ಧಾರವಿಯಲ್ಲಿ ಕೇವಲ 291 ಸಕ್ರಿಯ ಕೊರೊನಾ ಪ್ರಕರಣಗಳು ಹೊಂದಿದ್ದು, 1,815 ರೋಗಿಗಳು ಇದುವರೆಗು ಚೇತರಿಸಿಕೊಂದ್ದಾರೆ.

ಶನಿವಾರ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8.2 ಲಕ್ಷವನ್ನು ತಲುಪಿದ್ದು, 27,114 ಹೊಸ ಪ್ರಕರಣಗಳು ವರದಿಯಾಗಿದೆ ಹಾಗೂ ಇದುವರೆಗೆ 22,123 ಜನರು ಮೃತಪಟ್ಟಿದ್ದಾರೆ.


ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....