Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...