Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...