Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...