Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...