Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...