Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...