Homeಮುಖಪುಟಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

ಧಾರವಿ ಮರುಅಭಿವೃದ್ದಿ ಯೋಜನೆ ಅದಾನಿ ತೆಕ್ಕೆಗೆ: ನಿಯಮ ಉಲ್ಲಂಘಿಸಿ ಸಹಿ ಹಾಕಿದ ದೇವೇಂದ್ರ ಫಡ್ನವಿಸ್?

- Advertisement -
- Advertisement -

ಈಗಾಗಲೇ ಬಿಡ್ಡಿಂಗ್‌ನಲ್ಲಿ ದುಬೈ ಮೂಲದ ಸೆಕ್ಲಿಂಗ್ ಟೆಕ್ನಾಲಜಿ ಕಾರ್ಪೊರೇಷನ್‌ ಪಾಲಾಗಿದ್ದ ಧಾರವಿ ಮರುಅಭಿವೃದ್ದಿ ಯೋಜನೆಯನ್ನು ವಾಪಸ್ ಪಡೆದು ಪ್ರಧಾನಿ ಮೋದಿಯವರ ಗೌತಮ್ ಅದಾನಿ ಕಂಪನಿಗೆ ಮಹಾರಾಷ್ಟ್ರ ಸರ್ಕಾರ ಧಾರೆಯೆರೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 13 ರಂದು ವಸತಿ ಇಲಾಖೆಯನ್ನು ಹಸ್ತಾಂತರಿಸುವ ಮೊದಲು ದೇವೇಂದ್ರ ಫಡ್ನವೀಸ್ ಅವರ ಕೊನೆಯ ಕೆಲಸವೆಂದರೆ ಮುಂಬೈನ ಪ್ರಧಾನ ಜಾಗದಲ್ಲಿ 600 ಎಕರೆ ಭೂಮಿಯನ್ನು ಒಳಗೊಂಡಿರುವ 5,069 ಕೋಟಿ ರೂಗಳ ಧಾರಾವಿ ಮರುಅಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಔಪಚಾರಿಕವಾಗಿ ಅನುಮೋದನೆ ನೀಡುವುದಾಗಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಈ ಯೋಜನೆ ಮೂಲತಃ ಬೇರೆ ಬಿಡ್‌ದಾರರಿಗೆ ನೀಡಲಾಗಿತ್ತು. ಆದರೆ ಶಿಂದೆ-ಫಡ್ನವಿಸ್ ಸರ್ಕಾರವು ಪಿಎಂ ಮೋದಿ ಅವರ ಆಪ್ತ ಸ್ನೇಹಿತನಿಗೆ ಮಾತ್ರ ಈ ಯೋಜನೆ ಸಿಗುವಂತೆ ಖಚಿತಪಡಿಸಿಕೊಳ್ಳಲು ಟೆಂಡರ್ ಷರತ್ತುಗಳನ್ನು ಬದಲಾಯಿಸಲು ಅದ್ಭುತವಾದ ಚಮತ್ಕಾರ ಮಾಡಿತು. ಹಿಂದಿನ ಬಿಡ್ ವಿಜೇತರನ್ನು ಹೊರಗಿಡಲು ಬಿಡ್ ಅನ್ನು ರೂ. 10,000 ಕೋಟಿಯಿಂದ ರೂ. 20,000 ಕೋಟಿಗೆ ಏರಿಸಲು ಮತ್ತು ಹಣದ ಕೊರತೆಯಿರುವ ಅದಾನಿ ಗ್ರೂಪ್‌ನ ಹಾದಿಯನ್ನು ಸುಗಮಗೊಳಿಸುವ ಕಂತುಗಳಲ್ಲಿ ಪಾವತಿಯನ್ನು ಅನುಮತಿಸಿತು” ಎಂದು ಅವರು ದೂರಿದ್ದಾರೆ.

ಅಷ್ಟೇ ಅಲ್ಲದೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ, ಸರ್ಕಾರದ ನಿರ್ಣಯವು TDR (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಗಳ ಅನುಮತಿಗಳನ್ನು ಬೆಲೆಯಲ್ಲಿ ಯಾವುದೇ ಸೂಚ್ಯಂಕವಿಲ್ಲದೆ ಮಾರಾಟ ಮಾಡಲು ಮತ್ತು TDR ಅನ್ನು ಧಾರಾವಿ ಸ್ಪೆಷಲ್ ಪರ್ಪಸ್ ವೆಹಿಕಲ್ ಕಡ್ಡಾಯವಾಗಿ 50% ಖರೀದಿಸಲು ಸೂಚಿಸಿದೆ. ಆ ಮೂಲಕ ಯೋಜನೆಗೆ ಯಾವುದೇ ಬಂಡವಾಳ ಹೂಡದೆ ಲಾಭ ಬರುವಂತೆ ಮಾಡಲಾಗುತ್ತಿದೆ. ಏಕೆಂದರೆ ಕೊರತೆಯಿರುವ ಅದಾನಿಯನ್ನು ಉಳಿಸಲು ಹೀಗೆ ಮಾಡಲಾಗಿದೆ. ಬೇರೆ ಯಾವುದೇ ಡೆವಲಪರ್ ಅಂತಹ ಸಿಹಿ ಒಪ್ಪಂದವನ್ನು ಪಡೆದಿದ್ದಾರೆಯೇ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಹೇಗೆ ತಮ್ಮ ಆಪ್ತರಿಗಾಗಿ ಎಟಿಎಂ ಯಂತ್ರಗಳಾಗಿ ಬಳಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಮುಂಬೈನ ಕೊಳೆಗೇರಿ ನಿವಾಸಿಗಳ ಭೂಮಿ ಮತ್ತು ಜೀವನೋಪಾಯವನ್ನು ಕೂಡ ಮೊದಾನಿ ಮೆಗಾಸ್ಕಾಮ್‌ ಬಿಡುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ವಸತಿ ಖಾತೆಯನ್ನು ನಿರ್ವಹಿಸುತ್ತಿದ್ದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ತಮ್ಮ ಸಹೋದ್ಯೋಗಿ ಅತುಲ್ ಸೇವ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಒಂದು ದಿನದ ಮೊದಲು ಜಿಆರ್ ಅನ್ನು ತೆರವುಗೊಳಿಸಿದ್ದಾರೆ. ಕೈಗಾರಿಕೋದ್ಯಮಿಯ ಹೊಸ ಯುಗದ ಗುಲಾಮರನ್ನು ಭೇಟಿ ಮಾಡಿ” ಎಂದು ಶಿವಸೇನೆ ಉದ್ದವ್ ಬಣದ ಸ್ವಾತಿ ಚತುರ್ವೇದಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಧಾರಾವಿ ಪುನರಾಭಿವೃದ್ಧಿ ಯೋಜನೆ?

ಮುಂಬೈನಲ್ಲಿರುವ ಧಾರಾವಿ ಏಷ್ಯಾದ ಅತಿದೊಡ್ಡ ಕೊಳೆಗೇರಿ ಪ್ರದೇಶವಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಬಿಡ್ಡಿಂಗ್‌ನಲ್ಲಿ ಈ ಯೋಜನೆಯನ್ನು ಅದಾನಿ ಪ್ರಾಪರ್ಟೀಸ್ ಗೆದ್ದುಕೊಂಡಿತ್ತು. 2018 ರಲ್ಲಿ ಧಾರಾವಿ ಯೋಜನೆಗೆ ಟೆಂಡರ್ ಕರೆದಾಗ ದುಬೈ ಮೂಲದ ಸೆಕ್ಲಿಂಕ್ ಟೆಕ್ನಾಲಜಿ ಕಾರ್ಪೊರೇಶನ್ ಅತಿ ಹೆಚ್ಚು ಬಿಡ್ಡರ್ ಗೆದ್ದುಕೊಂಡಿತ್ತು. ಆದರೆ ಫಡ್ನವಿಸ್-ಶಿಂಧೆ ಸರ್ಕಾರವು ಯೋಜನೆಗೆ ಹೊಸ ಬಿಡ್ಡಿಂಗ್ ಕರೆದಿದ್ದರಿಂದ ದುಬೈ ಕಂಪನಿಯು ನ್ಯಾಯಾಲಯದ ಮೆಟ್ಟಿಲೇರಿತು. ದುಬೈ ಕಂಪನಿಯೊಂದಿಗೆ ಯಾವುದೇ ನಿರ್ಣಾಯಕ ಒಪ್ಪಂದವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಯೋಜನೆಯಲ್ಲಿ ಒಟ್ಟು 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲಾಗುವುದು ಎನ್ನಲಾಗುತ್ತಿದೆ. ಆದರೆ 600 ಎಕರೆ ಜಮೀನು ಮೇಲೆ ಎಲ್ಲರ ಕಣ್ಣು ಬಿದ್ದಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...