Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...