Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...