Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...