Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...