Homeಮುಖಪುಟಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ: ದೇಶದ ನಾಯಕರ ಮೌನ ಪ್ರಶ್ನಿಸಿದ ಅಂತರರಾಷ್ಟ್ರೀಯ ಮಾಧ್ಯಮಗಳು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಮೂರು ದಿನಗಳ ’ಧರ್ಮ ಸಂಸದ್‌’ ಧಾರ್ಮಿಕ ಸಭೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶಕ್ಕೆ ಒಳಗಾಗಿದ್ದು, ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿರುವುದನ್ನು ಖಂಡಿಸಿದ್ದಾರೆ. ದೇಶದ ನಾಯಕರು ಈ ಬಗ್ಗೆ ಮೌನ ವಹಿಸಿರುವುದನ್ನು ನೆಟ್ಟಿಗರು ಸೇರಿದಂತೆ ಅಂತರ ರಾಷ್ಟ್ರೀಯ ಮಾಧ್ಯಮಗಳು ಪ್ರಶ್ನಿಸಿ, ಆತಂಕ ವ್ಯಕ್ತಪಡಿಸಿವೆ.

ಡಿಸೆಂಬರ್ 17 ಮತ್ತು 19 ರ ನಡುವೆ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿರುವ ಹಲವು ಬಲಪಂಥೀಯ ನಾಯಕರು ಬಹಿರಂಗವಾಗಿಯೇ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಈ ಭಾಷಣದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

“ನಮ್ಮಲ್ಲಿ 100 ಜನರು 20 ಲಕ್ಷ ಜನರನ್ನು (ಮುಸ್ಲಿಮರು) ಕೊಲ್ಲಲು ಸಿದ್ಧರಿದ್ದರೆ, ನಾವು ಗೆದ್ದು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹಿಂದೂ ಮಹಾಸಭಾದ ನಾಯಕಿ ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ಉಲ್ಲೇಖಿಸಿ “ಕೊಲ್ಲಲು ಮತ್ತು ಜೈಲಿಗೆ ಹೋಗಲು ಸಿದ್ಧರಾಗಿರಿ” ಎಂದು ಬಲಪಂಥೀಯ ಹಿಂದೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇ‍ಷ ಭಾಷಣ: ಕಾನೂನು ಬಾಹಿರ ಎಂದ ಉತ್ತರಾಖಂಡ ಪೊಲೀಸರು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಭಾವಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಮ್ಮೆಳನದಲ್ಲಿ ಭಾಗವಹಿಸಿದ್ದರು.

ಈ ಘಟನೆಯ ವೀಡಿಯೊಗಳು ಈ ವಾರ ದೇಶದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಆದರೂ, ಪ್ರಧಾನಿ ಮೋದಿಯವರು ಮೌನವಾಗಿದ್ದಾರೆ. ಇದು ತಮ್ಮ ಕಟ್ಟಾ ಬೆಂಬಲಿಗರ ರಕ್ಷಣೆಗೆ ವಹಿಸಿರುವ ಮೌನ ಸಂಕೇತವೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

“ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಹಾಸ್ಯನಟರನ್ನು ಸುಲಭವಾಗಿ ಜೈಲಿಗಟ್ಟುವ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆಯ ಆರೋಪದ ಮೇಲೆ ಇವರುಗಳ ಕ್ರಮ ಕೈಗೊಳ್ಳುವಲ್ಲಿ ನಿಧಾನಗತಿ ಅನುಸರಿಸುತ್ತಿದ್ದಾರೆ. ಜೊತೆಗೆ ಪ್ರತಿಪಕ್ಷದ ರಾಜಕೀಯ ಗುಂಪುಗಳು ಸಹ ತಮ್ಮ ಪ್ರತಿಕ್ರಿಯೆ ನೀಡುವಲ್ಲಿ ವಹಿಸಿರುವ ಸಂಯಮ ಎಲ್ಲವೂ 2014 ರಲ್ಲಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಲಪಂಥೀಯ ಹಿಂದೂ ರಾಷ್ಟ್ರೀಯತೆಯು ದೇಶವನ್ನು ಯಾವ ಮಟ್ಟದಲ್ಲಿ ಹಿಡಿದಿದೆ ಎಂಬುದರ ಸೂಚನೆಯಾಗಿದೆ” ಎಂದು ದಿ ನ್ಯೂಯಾರ್ಕ್ ಟೈಮ್ಸ್ ಹೇಳಿದ.

“ಭಾರತದ ಸೆಕ್ಯುಲರಿಸಂ ಅನ್ನು ಸಂರಕ್ಷಿಸುವ ಅಗತ್ಯವನ್ನು ಪ್ರಸ್ತಾಪಿಸುವ ಬೆರಳೆಣಿಕೆಯಷ್ಟು ರಾಜಕೀಯ ನಾಯಕರು ಮಾತ್ರ ಉಳಿದಿದ್ದಾರೆ” ಎಂದು ನವದೆಹಲಿ ಬಳಿಯ ಅಶೋಕ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ಪ್ರಾಧ್ಯಾಪಕ ಗಿಲ್ಲೆಸ್ ವೆರ್ನಿಯರ್ಸ್ ಹೇಳಿದ್ದಾರೆ.

ಈ ವಿಡಿಯೋಗಳು, ವರದಿಗಳು ವೈರಲ್ ಆಗುತ್ತಿದ್ದಂತೆ ಆರ್‌ಟಿಐ ಕಾರ್ಯಕರ್ತ ಮತ್ತು ತೃಣಮೂಲ ನಾಯಕ ಸಾಕೇತ್ ಗೋಖಲೆ ಧಾರ್ಮಿಕ ಸಭೆಯ ವಿರುದ್ಧ ಜವಳಾಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

ವಿವಾದಿತ ಉಗ್ರ ಹಿಂದುತ್ವ ನಾಯಕ ಯತಿ ನರಸಿಂಗಾನಂದ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಹಿಂದೂ ರಕ್ಷಣಾ ಸೇನೆಯ ಅಧ್ಯಕ್ಷ ಸ್ವಾಮಿ ಪ್ರಬೋಧಾನಂದ ಗಿರಿ, ಸ್ವಾಮಿ ಆನಂದಸ್ವರೂಪ್, ಸಾಧ್ವಿ ಅನ್ನಪೂರ್ಣ ಮಾತನಾಡಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸಮಾವೇಶದ ಕೊನೆಯ ದಿನದಂದು ಭಾಗವಹಿಸಿದ್ದರು ಆದರೆ ‘ದ್ವೇಷ ಭಾಷಣ’ದಿಂದ ದೂರವಿದ್ದರು ಎಂದು ವರದಿಯಾಗಿದೆ.

“ಮುನಾವರ್ ಫರೂಕಿ ಅವರು ಮಾಡದ ಜೋಕ್‌ಗಳ ಆರೋಪಕ್ಕಾಗಿ ನಿರಂತರವಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ, ಆದರೆ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ ನರಮೇಧಕ್ಕೆ ಬಹಿರಂಗವಾಗಿ ಕರೆ ನೀಡಿದ ಧರ್ಮ ಸಂಸದ್ ಸದಸ್ಯರ ವಿರುದ್ಧ ಯಾವುದೇ ಕ್ರಮವಿಲ್ಲ… ಭಾರತ ಇನ್ನೂ ಪ್ರಜಾಪ್ರಭುತ್ವವಾಗಿದೆಯೇ?!” ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಡಾ.ಶಾಮಾ ಮೊಹಮ್ಮದ್ ಟ್ವೀಟ್ ಮಾಡಿದ್ದಾರೆ.

ಧರ್ಮ ಸಂಸದ್ ಸದಸ್ಯರ ಮಾತುಗಳನ್ನು ಕಾನೂನು ಬಾಹಿರ ಎಂದಿರುವ ಉತ್ತರಖಂಡ ಪೊಲೀಸರು ಧಾರ್ಮಿಕ ದ್ವೇಷ ಬಿತ್ತುವ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ಹರಿದ್ವಾರ್ ಧರ್ಮ ಸಂಸದ್‌ನಲ್ಲಿ ಏನು ನಡೆದಿದೆಯೋ ಅದು ತಪ್ಪು. ಸಂಬಂಧಪಟ್ಟವರು ಮತ್ತು ಹೊಣೆಗಾರರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ” ಎಂದು ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಉನಿಯಾಲ್ ಹೇಳಿದ್ದಾರೆ.


ಇದನ್ನೂ ಓದಿ: ‘ಖಾಲಿಸ್ತಾನಿ & LTTE ಭಯೋತ್ಪಾದಕರಾಗಿ’: ಹಿಂದೂ ಯುವಕರಿಗೆ ಬಹಿರಂಗ ಕರೆ ನೀಡಿದ ಯತಿ ನರಸಿಂಗಾನಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದ್ವೇಷದ ಬಾಶಣ ಮಾಡಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...